ಮುಂದುವರಿದ ಮಳೆ ; ಚಿಕ್ಕಮಗಳೂರಿನಲ್ಲೂ ಗುಡ್ಡಗಳ ಕುಸಿತ; ತೀವ್ರ ಆತಂಕ
Team Udayavani, Aug 19, 2018, 12:02 PM IST
ಚಿಕ್ಕಮಗಳೂರು:ಶತಮಾನ ಕಂಡರಿಯದ ಮಳೆ ಮತ್ತು ಗುಡ್ಡಗಳ ಕುಸಿತದಿಂದ ಕೊಡಗು ತತ್ತರಿಸಿ ಹೋಗಿರುವ ವೇಳೆಯಲ್ಲೇ ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದ್ದು ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು ಜನರು ತೀವ್ರ ಆತಂಕಿತರಾಗಿದ್ದಾರೆ.
ಕೊಪ್ಪ ತಾಲೂಕಿನ ಮೂರು ಕಡೆ ಮನೆಗಳಿಗೆ ತಾಗಿದಂತೆ ಗುಡ್ಡ ಕುಸಿತವಾಗಿದ್ದು ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹುಲುಗರಡಿ, ಬೈರದೇವರು ಮತ್ತು ಸಂಪಾನೆ ಯಲ್ಲಿ ಮನೆಗಳಿಗೆ ತಾಗಿದಂತೆ ಗುಡ್ಡ ಕುಸಿದು ಬಿದ್ದಿದೆ.
ಕಳೆದ ತಿಂಗಳಿನಿಂದ ನದಿಗಳು ತುಂಬಿ ಹರಿಯುತ್ತಿದ್ದು ಮತ್ತೆ ಮಳೆ ಸುರಿಯುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜನರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಕುದುರೆ ಮುಖ ಬಳಿ ಘಾಟಿಯಲ್ಲಿ ಹಲವೆಡೆ ಭಾನುವಾರ ಗುಡ್ಡ ಕುಸಿತವಾಗಿದ್ದು ಸಾವಿರಾರು ವಾಹನ ಸವಾರರು ಪರದಾಡಬೇಕಾಗಿದೆ. ಉಡುಪಿ ಮತ್ತು ಮಂಗಳೂರಿಗೆ ಸಂಪರ್ಕಕ್ಕೆ ಪ್ರಮುಖ ರಸ್ತೆಯಾಗಿರುವ ಹೆದ್ದಾರಿಯಲ್ಲಿ ಸಂಚರಿಸಲೂ ವಾಹನ ಸವಾರರು ಭಯ ಪಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ