ರೈತರ ಕಣ್ಣೀರ ಕತೆ


Team Udayavani, Nov 26, 2021, 7:40 AM IST

ರೈತರ ಕಣ್ಣೀರ ಕತೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಲಕ್ಷಾಂತರ ರೈತರು ಕಣ್ಣೀರು ಹರಿಸು ವಂತಾಗಿದೆ. ಜುಲೈಯಿಂದ ನವೆಂಬರ್‌ ತಿಂಗಳ ವರೆಗೆ ಸುರಿದ ಮಳೆಯಿಂದ 11 ಲಕ್ಷ ಹೆಕ್ಟೇರ್‌ ಕೃಷಿ ಮತ್ತು ತೋಟಗಾರಿಕೆ ಬೆಳೆ ನಾಶವಾಗಿದೆ. ನವೆಂಬರ್‌ ತಿಂಗಳೊಂದರಲ್ಲೇ ದಾಖಲೆಯ ಐದು ಲಕ್ಷ ಹೆಕ್ಟೇರ್‌ ಬೆಳೆ ನಾಶ ವಾಗಿದ್ದು, ಲಕ್ಷಾಂತರ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಮಧ್ಯೆ ಕಂದಾಯ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿರುವ ಹಣಕಾಸು ಇಲಾಖೆ ಕಾರ್ಯದರ್ಶಿ, ಬೆಳೆ ಪರಿಹಾರಕ್ಕೆ ಸಂಬಂಧಿಸಿದ ಸಮೀಕ್ಷೆ ವರದಿ ಬಂದ ತತ್‌ಕ್ಷಣ ರೈತರ ಖಾತೆಗೆ ಪರಿಹಾರ ಮೊತ್ತೆ ಜಮೆ ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬೆಳೆ ನಷ್ಟ ಕುರಿತು ಆ್ಯಪ್‌ನಲ್ಲಿ ಅಪ್‌ಲೋಡ್‌ ಆದ ಕೂಡಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಲು ನಿರ್ದೇಶನ ನೀಡಿದ್ದಾರೆ.

ಜುಲೈಯಿಂದ ಇಲ್ಲಿಯ ವರೆಗೆ ರಾಜ್ಯದಲ್ಲಿ ಮಳೆಯಿಂದ 11 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿದೆ. ನವೆಂಬರ್‌ ಒಂದರಲ್ಲೇ 5 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿದೆ ಎಂದು ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ. ಸರಕಾರ ಮಳೆಯಿಂದ ಉಂಟಾಗಿರುವ ಬೆಳೆ ನಷ್ಟದ ಮಾಹಿತಿ ಮುಚ್ಚಿಟ್ಟಿಲ್ಲ. ಅದರ ಅಗತ್ಯವೂ ಇಲ್ಲ. ವಿಪಕ್ಷಗಳು ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿವೆ. ನಮ್ಮ ಸರಕಾರ ನೆರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಿದೆ ಎಂದಿದ್ದಾರೆ.

ಸರಕಾರವು ಈಗಾಗಲೇ ಕಂದಾಯ, ಕೃಷಿ, ತೋಟ ಗಾರಿಕೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಹಾನಿಯ ಸಮೀಕ್ಷೆಗೆ ಸೂಚನೆ ನೀಡಿದ್ದು, ವರದಿ ಬಂದ ತತ್‌ಕ್ಷಣ ಪರಿಹಾರ ವಿತರಣೆ ಕಾರ್ಯವೂ ನಡೆಯಲಿದೆ. ಎಲ್ಲವೂ ಪಾರದರ್ಶಕವಾಗಿದೆ. ಬೆಳೆ ಪರಿಹಾರ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ಪರಿಹಾರ ಮೊತ್ತ ಜಮೆ :

ರಾಗಿ, ಜೋಳ, ಭತ್ತ, ತರಕಾರಿ, ಶೇಂಗಾ ಸಹಿತ ವ್ಯಾಪಕ ಬೆಳೆ ನಷ್ಟವಾಗಿದೆ. ಅದಕ್ಕೆ ಕೂಡಲೇ ಪರಿಹಾರ ಕೊಡಲು ಸಮೀಕ್ಷೆ ಮಾಡಿ, ಆ್ಯಪ್‌ನಲ್ಲಿ ಮಾಹಿತಿ ಲೋಡ್‌ ಆದ ತತ್‌ಕ್ಷಣ ಪರಿಹಾರದ ಹಣ ರೈತರ ಖಾತೆಗೆ ಜಮೆಯಾಗಲಿದೆ. ಹಣಕಾಸು ಕಾರ್ಯದರ್ಶಿಯವರು ಕಂದಾಯ ಇಲಾಖೆ ಕಾರ್ಯದರ್ಶಿಗೆ ಹಣ ಬಿಡುಗಡೆ ಮಾಡಿದ್ದು, ಕೂಡಲೇ ಖಾತೆಗೆ ಜಮೆ ಮಾಡಬೇಕು; ಹಣ ಕೊರತೆಯಾದರೆ ಮುಂಚಿತವಾಗಿ ತಿಳಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಳೆಯಿಂದ 118 ಸಾವು :

ಮನೆ ಹಾನಿಯಾದವರಿಗೆ ಈವರೆಗೆ 332 ಕೋಟಿ ರೂ. ನೀಡಲಾಗಿತ್ತು. ಮತ್ತೆ 415 ಕೋ.ರೂ. ನೀಡಿದ್ದೇವೆ. ಮನೆಗೆ ನೀರು ನುಗ್ಗಿದ್ದರೆ ತಲಾ 10 ಸಾವಿರ ರೂ. 24 ತಾಸುಗಳ ಒಳಗೆ ನೀಡುತ್ತೇವೆ. ಈವರೆಗೆ 85 ಸಾವಿರ ಜನರಿಗೆ ಸುಮಾರು 85 ಕೋ.ರೂ. ನೀಡಿದ್ದೇವೆ. ಈ ವರ್ಷ ಮಳೆಯಿಂದ 118 ಮಂದಿ ಸಾವನ್ನಪ್ಪಿದ್ದು, ತಲಾ 5 ಲಕ್ಷ ರೂ.ಗಳಂತೆ 5.9 ಕೋಟಿ ರೂ. ನೀಡಲಾಗಿದೆ ಎಂದು ಸಚಿವ ಅಶೋಕ್‌ ಹೇಳಿದ್ದಾರೆ.

ಸಾಮಾನ್ಯ ಬೆಳೆಗೆ 20 ಸಾವಿರ ರೂ., ನೀರಾವರಿ ಜಮೀನಿಗೆ 35 ಸಾವಿರ ರೂ., ವಾಣಿಜ್ಯ ಬೆಳೆಗೆ 49 ಸಾವಿರ ರೂ. ಪರಿಹಾರ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೇನೆ. ಇದು ಇಡೀ ರಾಷ್ಟ್ರಕ್ಕೆ ಅನ್ವಯವಾಗಲಿದೆ ಎಂದರು.

ಇಂದಿನಿಂದ 3 ದಿನ ಮತ್ತೆ ಮಳೆ? : ಬಂಗಾಲಕೊಲ್ಲಿಯ ಆಗ್ನೇಯ ಭಾಗದಲ್ಲಿ ಮತ್ತೂಂದು ಚಂಡಮಾರುತದ ಚಟುವಟಿಕೆ ಆರಂಭವಾಗಿದ್ದು, ಅದರ ಪರಿಣಾಮವಾಗಿ ಶುಕ್ರವಾರ ಬಂಗಾಲ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಹೀಗಾಗಿ ರಾಜ್ಯದಲ್ಲಿ  ನ. 26ರಿಂದ 28ರ ವರೆಗೆ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ. 28ರ ವರೆಗೆ 3 ದಿನ ಎಚ್ಚರಿಕೆ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡ ಲಾಗಿದೆ ಎಂದು ಸಚಿವ ಅಶೋಕ್‌ ತಿಳಿಸಿದ್ದಾರೆ.

ಪರಿಹಾರ ನೀಡಲು ಕ್ರಮ :

ಪ್ರತಿನಿತ್ಯ ಜಂಟಿ ಸಮೀಕ್ಷೆ ಮುಗಿದಂದೇ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಎಲ್ಲ ಡಿ.ಸಿ.ಗಳಿಗೂ ಸೂಚನೆ ನೀಡಿದ್ದೇನೆ. ಇದರಿಂದ ರೈತರಿಗೆ ಮರುದಿನವೇ ಪರಿಹಾರ ನೀಡಲು ಸಾಧ್ಯವಾಗುತ್ತದೆ. ನ. 30ರೊಳಗೆ ಸಮೀಕ್ಷೆ ಪೂರ್ಣ ಗೊಳಿಸಲು ಆದೇಶ ನೀಡಿದ್ದೇನೆ ಎಂದು ಸಚಿವ ಅಶೋಕ್‌ ಹೇಳಿದ್ದಾರೆ. ಕೊಡಗು, ಹಾಸನ, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬೆಳೆ, ಆಸ್ತಿ ಹಾನಿಯನ್ನು ಪರಿಶೀಲನೆ ಮಾಡಿದ್ದೇನೆ. ಸರಕಾರ 1.5 ಲಕ್ಷ ರೈತರಿಗೆ ಈವರೆಗೆ 130 ಕೋಟಿ ರೂ. ಹಣ ಪಾವತಿ ಮಾಡಿತ್ತು. ಬುಧವಾರ 70 ಸಾವಿರ ರೈತರಿಗೆ 52 ಕೋಟಿ ಹಣವನ್ನು ನೇರವಾಗಿ ಬ್ಯಾಂಕಿಗೆ ಜಮಾ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಳೆಯಿಂದಾದ ಬೆಳೆಹಾನಿಯ ಯಾವುದೇ ಮಾಹಿತಿ ಮುಚ್ಚಿಡುವ ಕೆಲಸ ಮಾಡಿಲ್ಲ. ಸರಕಾರ ಎಲ್ಲವನ್ನೂ ತೆರೆದಿಟ್ಟಿದೆ. ಬೆಳೆ ಪರಿಹಾರ ರೈತರ ಖಾತೆಗೆ ಹೋಗುತ್ತದೆ. ಅದೇನು ಸಿದ್ದರಾಮಯ್ಯ ಅವರ ಖಾತೆಗೆ ಹೋಗುತ್ತದೆಯೇ? ಪರಿಹಾರ ಪಡೆದವರು ಅದನ್ನು ಹೇಳಿಕೊಳ್ಳುತ್ತಾರೆಯೇ? -ಬಿ.ಸಿ. ಪಾಟೀಲ್‌, ಕೃಷಿ ಸಚಿವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.