ಬೆಂಗಳೂರು : ಬೆಳ್ಳಂಬೆಳಗ್ಗೆ ಗುಡುಗು ಸಹಿತ ಮಳೆ; ಸವಾರರ ಪರದಾಟ
Team Udayavani, May 1, 2018, 9:53 AM IST
ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಸಿಲಿಕಾನ್ ಸಿಟಿಯ ಜನರಿಗೆ ವರುಣ ತಂಪೆರೆದಿದ್ದು, ಸೋಮವಾರ ಬೆಳ್ಳಂಬೆಳಗ್ಗೆ ನಗರದ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮವಾಗಿ ವಾಹನ ಸವಾರರು ಪರದಾಡಬೇಕಾಯಿತು.
ಸೋಮವಾರ ಸಂಜೆಯೆ ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿಯೂ ಕೆಲವೆಡೆ ಮಳೆ ಸುರಿದು ಮರಗಳು ಧರೆಗುರುಳಿವೆ.
ಕರ್ನಾಟಕರ ಹಲವೆಡೆ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯವರು ಮುನ್ಸೂಚನೆ ನೀಡಿದ್ದಾರೆ.