ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ
Team Udayavani, Mar 30, 2019, 2:27 PM IST
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದ್ದು, ಕಾಫಿ ಬೆಳೆಗಾರರ ಮುಖದಲ್ಲಿ ಹರ್ಷ ಮೂಡಿಸಿದೆ. ಮಧ್ಯಾಹ್ನ 3ರ ಸುಮಾರಿಗೆ ಗುಡುಗು, ಮಿಂಚಿನಿಂದ ಆರಂಭವಾದ ಮಳೆ ಒಂದೂವರೆ ಗಂಟೆಗೂ ಅಧಿಕ ಕಾಲ ಸುರಿಯಿತು. ಕಾಫಿಯ ಹೂಮಳೆ ಎಂದೆ ಕರೆಯಲ್ಪಡುವ ರೇವತಿ ಮಳೆ ಸ್ವಾಭಾವಿಕವಾಗಿ ಮಾ.31ಕ್ಕೆ ಆರಂಭವಾಗುತ್ತದೆ. ಈ ವರ್ಷ ಎರಡು ದಿನ ಮುಂಚಿತವಾಗಿ ಆರಂಭವಾಗಿದೆ ಎಂಬುದು ಬೆಳೆಗಾರರ ಅಭಿಪ್ರಾಯ.
ಮಳೆ ಸುರಿದಿದ್ದರಿಂದ ಕಾಫಿ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸುತ್ತಮುತ್ತಲ ಪ್ರದೇಶದಲ್ಲಿ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಬಾಳೆಹೊನ್ನೂರಿನ ರೇಣುಕಾ ನಗರದಲ್ಲಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಹಾವೇರಿ ತಾಲೂಕಿನ ವಿವಿಧೆಡೆಯೂ ಸಂಜೆ ವೇಳೆ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ.
ಗದಗಿನಲ್ಲಿ 1 ಸೆಂ.ಮೀ.ನಷ್ಟು ಮಳೆ ಸುರಿದಿದೆ. ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲೆಡೆ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ