ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ
Team Udayavani, Mar 19, 2023, 6:38 AM IST
ಬೆಂಗಳೂರು: ಕರಾವಳಿ, ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆಗಳಿದ್ದು, ಇದರ ಜತೆಗೆ ಉಷ್ಣಾಂಶವೂ 3 ಡಿ.ಸೆ.ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.
ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾ.20ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 3 ಡಿ.ಸೆ. ಹೆಚ್ಚಳವಾಗುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
ಶನಿವಾರ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಬೀದರ್ ಹಾಗೂ ಬೀದರ್ನ ನಿರ್ಣಾದಲ್ಲಿ ಅತೀ ಹೆಚ್ಚು 7 ಸೆಂ.ಮೀ ಮಳೆಯಾಗಿದೆ.
ಯಾದಗಿರಿಯ ಶಹಪುರದಲ್ಲಿ 6, ಬೀದರ್ ನಿಟ್ಟೂರಿನಲ್ಲಿ 5, ಬೀದರ್ನ ಮನ್ನಾಲಿ, ಮಂಠಾಳ, ಸಂತಪುರ, ಜನವಾಡ, ಹುಮನಾಬಾದ್, ಕಲಬುರಗಿಯ ಕಮಲಪುರದಲ್ಲಿ ತಲಾ 3 ಸೆಂ.ಮೀ, ಬೀದರ್ನ ಮುಡಬಿ, ಕೋಲಾರ, ಮಾಲೂರು, ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ, ಎಂಪ್ರಿಯಲ್ಲಿ ತಲಾ 2, ಬೀದರ್ನ ರಾಜೇಶ್ವರ್, ಹಲಬುರ್ಗಾ, ಕಲಬುರಗಿಯ ಮುಧೋಳೆ, ಅಡಕಿ, ವಿಜಯಪುರದ ತಾಳಿಕೋಟೆ, ಬೆಂಗಳೂರಿನ ಗೋಪಾಲನಗರ, ಉತ್ತರಹಳ್ಳಿ, ಬೆಂಗಳೂರು ಗ್ರಾಮಾಂತರದ ಹೊಸಕೋಟೆ, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಮಂಗಳೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು