ರಾಜಧಾನಿ ಸೇರಿ ಹಲವೆಡೆ ಮತ್ತೆ ವರುಣನಬ್ಬರ
Team Udayavani, Sep 24, 2019, 3:05 AM IST
ಬೆಂಗಳೂರು/ಹುಬ್ಬಳ್ಳಿ: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸೋಮವಾರ ಬೆಳಿಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿತ್ತು.
ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಸೋಮ ವಾರ ಉತ್ತಮ ಮಳೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಉಕ್ಕಿ ಹರಿದು ಕೆಲ ಕಾಲ ಆತಂಕ ಸೃಷ್ಟಿಸಿದರೆ ಗಿರಿ ಶ್ರೇಣಿ ಪ್ರದೇಶದಲ್ಲೂ ಉತ್ತಮ ಮಳೆಯಾಗಿದೆ. ನರಸಿಂಹರಾಜಪುರದಲ್ಲೂ ಸೋಮವಾರ ಸಂಜೆ ವೇಳೆಗೆ ಭಾರೀ ಮಳೆ ಸುರಿದಿದೆ. ತರೀಕೆರೆ ತಾಲೂಕಿನ ವಿವಿಧೆಡೆ ಮಳೆಯಾಗಿದೆ.
ನೂರಾರು ಎಕರೆ ಹೊಲ ಜಲಾವೃತ: ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಧಾರಾಕಾರ ಮಳೆ ಸುರಿದು ನೂರಾರು ಹೆಕ್ಟೇರ್ ಹೊಲಗಳೆಲ್ಲ ಜಲಾವೃತವಾಗಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ಮುಖ್ಯರಸ್ತೆ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿತ್ತು.
ಭಾರೀ ಮಳೆಯಿಂದ ಮೆಣಸಿನಕಾಯಿ ಹಾಗೂ ಹತ್ತಿ ಹೊಲಗಳಿಗೂ ನೀರು ನುಗ್ಗಿದ್ದು ಅಂದಾಜು 500 ಎಕರೆ ಪ್ರದೇಶ ವ್ಯಾಪ್ತಿಯ ಬೆಳೆ ನಷ್ಟವಾಗಿದೆ. ಗ್ರಾಮದ ಸರ್ಕಾರಿ ಶಾಲೆ ಆವರಣ ಹಾಗೂ ಕೊಠಡಿಯೊಳಗೂ ನೀರು ನುಗ್ಗಿದೆ. ಸೋಮವಾರ ಬೆಳಗಿನ ಜಾವ ಸುರಿದ ಧಾರಾಕಾರ ಮಳೆಗೆ ಎಂಟು ಎಕರೆಯಲ್ಲಿ ಬೆಳೆದ ಬೆಳೆ ಸಂಪೂರ್ಣ ಜಲಾವೃತ ಆಗಿದೆ. ಇದರಿಂದ ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಯರಿಸ್ವಾಮಿ ಹೇಳಿದರು.
ಉಕ್ಕಿಹರಿದ ದರ್ಪಣತೀರ್ಥ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ಸಂಜೆ ದಿಢೀರನೆ ಭಾರೀ ಮಳೆ ಸುರಿದಿದೆ. ಕ್ಷೇತ್ರದ ದರ್ಪಣ ತೀರ್ಥ ನದಿಯಲ್ಲಿ ಹಠಾತ್ತಾಗಿ ಪ್ರವಾಹ ಉಕ್ಕಿ ಹರಿದು ಸ್ವಲ್ಪ ಕಾಲ ಆತಂಕ ಸೃಷ್ಟಿಸಿತು. ಕುಮಾರಪರ್ವತದ ತಪ್ಪಲು ಪ್ರದೇಶ ಮತ್ತು ಸ್ಥಳೀಯವಾಗಿ ಸತತ ನಾಲ್ಕು ತಾಸು ಮಳೆ ಸುರಿಯಿತು. ದರ್ಪಣ ತೀರ್ಥ ತುಂಬಿ ಹರಿದ ಪರಿಣಾಮ ಆದಿಸುಬ್ರಹ್ಮಣ್ಯ ದೇಗುಲದ ಹೊರಾಂಗಣಕ್ಕೆ ನೀರು ನುಗ್ಗಿದೆ. ಆದಿ ದೇಗುಲದ ಅಶ್ವತ್ಥಕಟ್ಟೆ ಮುಳುಗಡೆ ಗೊಂಡಿತ್ತು. ದೇಗುಲದ ಆವರಣದೊಳಕ್ಕೆ ನೆರೆ ನೀರು ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!