ಭಾರೀ ಮಳೆ, ಗುಡ್ಡ ಕುಸಿತ; ಮಡಿಕೇರಿ-ಮಂಗಳೂರು ಹೆದ್ದಾರಿ ಬಂದ್
Team Udayavani, Aug 15, 2018, 12:18 PM IST
ಹಾಸನ/ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಡಿಕೇರಿ, ಹಾಸನ, ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.
ಧಾರಾಕಾರ ಮಳೆಯಿಂದ ಕೊಡಗಿನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಎನ್ ಡಿಆರ್ ಎಫ್ ತಂಡದಿಂದ ಬಿರುಸಿನ ಕಾರ್ಯಾಚರಣೆ ನಡೆಯುತ್ತಿದೆ. ಮೂರ್ನಾಡು, ಕೊಟ್ಟಮುಡಿ, ನಾಪೊಕ್ಲುವಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಗೆ ವಾಹನವೊಂದು ಕೊಚ್ಚಿಕೊಂಡು ಹೋದ ಘಟನೆ ಬುಧವಾರ ನಡೆದಿದೆ. ಹಾರಂಗಿ ಜಲಾಶಯ ಹೊರಹರಿವು ಹೆಚ್ಚಳವಾಗಿದ್ದು, ಕೂಡಿಗೆ ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಮಡಿಕೇರಿ, ವಿರಾಜಪೇಟೆ ಸಂಪರ್ಕ ಕಲ್ಪಿಸುವ ರಸ್ತೆಯ ಸಂಚಾರ ಕೂಡಾ ಸ್ಥಗಿತಗೊಂಡಿದೆ. ಗುಡ್ಡ ಕುಸಿದ ನಿಟ್ಟಿನಲ್ಲಿ ಮಡಿಕೇರಿ, ವಿರಾಜಪೇಟೆ ಸಂಚಾರ ಬಂದ್ ಆಗಿದೆ ಎಂದು ವರದಿ ವಿವರಿಸಿದೆ.
ಸಕಲೇಶಪುರ ತಾಲೂಕಿನ ಎಂಟು ಕಡೆ ಭೂ ಕುಸಿತವಾಗಿದೆ. ಶಿರಾಡಿಘಾಟ್ ನಲ್ಲಿ ರಸ್ತೆ ಬಿರುಕು ಬಿಟ್ಟಿದ್ದು, ಹಲವೆಡೆ ರಸ್ತೆ ಕುಸಿದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ