ಅಕ್ಟೋಬರ್ ವರೆಗೆ ಕೋವಿಡ್ ಹೆಚ್ಚಳ: ಜನಸಾಮಾನ್ಯರಿಗೆ ಭೀತಿ ಬೇಡ ಎಂದ ಸಚಿವ ಸುಧಾಕರ್
Team Udayavani, Jun 16, 2022, 10:30 AM IST
ಬೆಂಗಳೂರು: ಜೂನ್ ಮೂರನೇ ವಾರದಿಂದ ಅಕ್ಟೋಬರ್ ವರೆಗೂ ಕೊವಿಡ್ ಬರಬಹುದು ಎಂದು ಕಾನ್ಪುರ ಐಐಟಿ ವರದಿ ನೀಡಿದ್ದಾರೆ. ಈ ಹಿಂದೆ ಕೂಡ ಇವರೇ ಮಾಡಿ ವರದಿ ನೀಡಿದ್ದರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ದತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೋವಿಡ್ ಪ್ರಭೇದ ಸೌಮ್ಯ ಲಕ್ಷಣ ಇರುವುದರಿಂದ ಜನ ಸಾಮಾನ್ಯರು ಯಾವುದೇ ಆತಂಕ, ಭಯಪಡುವ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.
ಶಾಲೆಗಳಲ್ಲಿ ಕೋವಿಡ್ ಹೆಚ್ಚಳ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆರೆಡು ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಕೊಟ್ಟಿದ್ದಾರೆ. ಅದು ಒಂದೊ ಎರಡೋ ಶಾಲೆಯಷ್ಟೇ. ಈಗಾಗಲೇ ಸ್ಪಷ್ಟವಾದ ನಿಯಮಾವಳಿ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬರುವಾಗ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಚೆಕ್ ಮಾಡ್ತಿದ್ದೇವೆ. ಶಾಲೆಗಳಲ್ಲಿ ಎಲ್ಲಾ ನಿಯಮ ಪಾಲನೆ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಚಿವ ಸುಧಾಕರ್, ಕಾಂಗ್ರೆಸ್ ನಾಯಕರ ನಡೆ ನಾಚಿಕೆ ತರಿಸುವಂತದ್ದು. ಒಂದು ಕಡೆ ಸಂವಿಧಾನದ ಬಗ್ಗೆ ಸಾಕಷ್ಟು ಭಾಷಣ ಮಾಡುತ್ತಾರೆ. ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರುವ ಕೆಲಸ ಮಾಡುತ್ತಾರೆ. ಈ ಹಿಂದೆ ಮಾಜಿ ಪ್ರಧಾನಿ ಪಿವಿ ನರಂಸಿಹ ರಾವ್, ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರು ವಿರುದ್ದವೂ ವಿಚಾರಣೆ ನಡೆದಿತ್ತು. ನಮ್ಮ ಖರ್ಗೆಯವರ ವಿಚಾರಣೆ ನಡೆದಾಗ ಯಾರು ಚಕಾರ ಎತ್ತಿಲ್ಲ. ಆಗ ಯಾರು ಪ್ರತಿಭಟನೆಗೆ ಮುಂದಾಗಿಲ್ಲ ಎಂದರು.
ಇದನ್ನೂ ಓದಿ:ಭಾರತದಲ್ಲಿ 24 ಗಂಟೆಯಲ್ಲಿ 12,213 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ಕಾಂಗ್ರೆಸ್ ನಾಯಕರು ಮಾಡುತ್ತಿರುವುದು ಸರಿಯಲ್ಲ. ಈ ರೀತಿ ಮಾಡುವುದರಿಂದ ತಪ್ಪು ಸಂದೇಶ ಹೋಗುತ್ತಿದೆ. ಏನೇ ಇದ್ದರೂ ವಿಚಾರಣೆಯಾಗಲಿ, ಸತ್ಯ ಹೊರಗಡೆ ಬರಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ