ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ


Team Udayavani, Nov 12, 2020, 1:35 PM IST

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಬೆಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲಿನಿಂದ ಹೆದರಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರಾಜರಾಜೇಶ್ವರಿ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಎಂದೆಂದಿಗೂ ನನ್ನಕರ್ಮ ಭೂಮಿ. ಎಂದಿನಂತೆ ಜನರೊಂದಿಗಿದ್ದು ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರೆಸು ಮೂಲಕ ನೊಂದವರ ಧ್ವನಿಯಾಗುತ್ತೇನೆ. ನಾನು ಈ ಸೋಲಿನಿಂದ ದೃತಿಗೆಡುವುದಿಲ್ಲ ಎಂದುಉದಯವಾಣಿಸಂದರ್ಶನದಲ್ಲಿ ಆತ್ಮಾವಲೋಕನದ ಮಾತುಗಳನ್ನಾಡಿದ್ದಾರೆ.

 ಫಲಿತಾಂಶದ ಬಗ್ಗೆ ನಿಮ್ಮಅಭಿಪ್ರಾಯ ಏನು ? :

ಈ ಚುನಾವಣಾ ಫಲಿತಾಂಶ ಸ್ವೀಕರಿಸುತ್ತೇನೆ. ಸೋಲು ಗೆಲುವು ಇದ್ದಿದ್ದೆ. ಎರಡನ್ನೂ ಸಮನಾಗಿ ಸ್ವೀಕರಿಸುತ್ತೇನೆ. ಮುಂದಿನ ಗೆದ್ದೇ ಗೆಲ್ಲುವ ವಿಶ್ವಾಸ ಇದೆ. ನಮ್ಮಕಾರ್ಯಕರ್ತರು ಹಗಲು ರಾತ್ರಿಕೆಲಸ ಮಾಡಿದ್ದಾರೆ ಅವರಿಗೆ ಕೃತಜ್ಞತೆ ಹೇಳುತ್ತೇನೆ.

ನಿಮ್ಮನ್ನು ಯಾಕೆ ಜನರು ನಿರ್ಲಕ್ಷ್ಯ ಮಾಡಿದರು ಅಂತ ಅನ್ನಿಸ್ತು? :

ಗೊತ್ತಿಲ್ಲ ನಾನು ಸಾಕಷ್ಟು ನಿರೀಕ್ಷೆ.ಇಟ್ಟಿದ್ದೆ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಚರ್ಚೆ ಮಾಡುತ್ತೇವೆ. ಇನ್ನಷ್ಟುಕೆಲಸ ಮಾಡಬೇಕು ಅನಿಸುತ್ತೆ.

ಮುನಿರತ್ನ ವಿರುದ್ಧ ಸಾಕಷ್ಟುಆರೊಪ ಮಾಡಿದ್ದಿರಿ ಅದು ಮತಗಳಾಗಿ ಪರಿವರ್ತಿಸಲು ಏಕೆ ಆಗಲಿಲ್ಲಾ ?

ಎಲ್ಲವೂ ಕಾರಣವಾಗಿರಬಹುದು. ಇವತ್ತಷ್ಟೆ ಫಲಿತಾಂಶ ಬಂದಿದೆ. ನಾವು ಎಲ್ಲಿ ತಪ್ಪಿದ್ವಿ ಅನ್ನೋದ್ನ ಯೋಚನೆ ಮಾಡಬೇಕು.

ನೀವು ಹೋದಲೆಲ್ಲ ಒಳ್ಳೆಯ ಪ್ರತಿಕ್ರಿಯೆ ಸಿಕ್ಕರೂ, ಅದು ಮತಗಳಾಗಿ ಪರಿವರ್ತನೆ ಆಗಲಿಲ್ಲ?

ಗೊತ್ತಿಲ್ಲ. ನಾನು ಹೋದ ಕಡೆಯಲ್ಲಿ ಒಳ್ಳೆಯ ಪ್ರತಿಕ್ರಿಯೆ ಬಂದಿತ್ತು ಅಷ್ಟೇ ಪ್ರೀತಿ ವಿಶ್ವಾಸದಿಂದ ನೋಡಿದರು. ಮನೆ ಒಳಗೆಕರೆದು ಗೌರವ ಕೊಡುತ್ತಿದ್ದರು. ಅದು ಮತಗಳಾಗಿ ಯಾಕೆ ಪರಿವರ್ತನೆ ಆಗಿಲ್ಲ ಅನ್ನುವುದು ಅರ್ಥವಾಗಿಲ್ಲ.

ಒಳ ರಾಜಕೀಯದ ವಾಸನೆ ಬಡಿಯಿತಾ ನಿಮಗೆ :

ನಮ್ಮ ಪಕ್ಷದಲ್ಲಿ ಎಲ್ಲರೂ ಕಷ್ಟಪಟ್ಟುಕೆಲಸ ಮಾಡಿದ್ದಾರೆ. ನನಗೆ ಯಾರ ಬಗ್ಗೆಯೂ ಅಸಮಾಧಾನ ಇಲ್ಲ. ಬೇರೆ ಪಕ್ಷದ ಒಳ ರಾಜಕೀಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.

ರಾಜಕೀಯ ಸಾಕು ಅನಿಸ್ತಾ, ಇದೇ ವೃತ್ತಿಯಲ್ಲಿ ಮುಂದುವರೆಯುತ್ತಿರಾ? :

ನಾನು ರಾಜಕೀಯಕ್ಕೆ ಅಂತ ಕಾಲಿಟ್ಟಿದ್ದೀನಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ. ನನ್ನಕೈಲಾದ ಮಟ್ಟಿಗೆ ಜನರ ಸೇವೆ ಮಾಡುತ್ತೇನೆ. ರಾಜಕೀಯದಲ್ಲಿಯೇ ಮುಂದುವರೆಯುತ್ತೇನೆ.

ನಿಮ್ಮ ಪಕ್ಷದ ನಾಯಕರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಅನಿಸ್ತಾ? :

ಖಂಡಿತವಾಗಿಯೂ ಎಲ್ಲಕಾರ್ಯಕರ್ತರು ಹಾಗೂ ನಾಯಕರು ತಮ್ಮ ಮನೆಕೆಲಸ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಯಾರ ಕೆಲಸದ ಬಗ್ಗೆಯೂ ನನಗೆ ಅನುಮಾನ ಇಲ್ಲ

ಒಕ್ಕಲಿಗ ಸಮುದಾಯಓಲೈಕೆ ಮಾಡಿದ್ದು ತಪ್ಪಾಯಿತು ಅಂತ ಅನಿಸ್ತಾ?

ನಾನು ಯಾವತ್ತೂ ಒಂದೇ ಸಮುದಾಯದ ಮತಗಳು ಬೇಕು ಎಂದು ಕೇಳಿಲ್ಲ. ಎಲ್ಲ ಸಮುದಾಯಗಳ ಮತಕೇಳಿದ್ದೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.