ಬಿಜೆಪಿಗೆ ಸೇರಿದ ರಾಜೇಶ್ ಗೌಡ: ಶಿರಾದಲ್ಲಿ ಗೆಲುವು ನಮ್ಮದೇ ಎಂದ ನಳೀನ್ ಕುಮಾರ್ ಕಟೀಲ್
Team Udayavani, Oct 3, 2020, 5:10 PM IST
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಡಾ. ರಾಜೇಶ್ ಗೌಡ ಇಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತನ್ನ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ನಂತರ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಹಾಗಾಗಿ ಕಾಂಗ್ರೆಸ್ -ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಇದನ್ನೂ ಓದಿ:ಮಿನಿಫೈಟ್: ಶಿರಾ ಬಿಜೆಪಿ ಅಭ್ಯರ್ಥಿ ಬಹುತೇಕ ಅಂತಿಮ, ರಾಜೇಶ್ ಗೌಡ ಇಂದು ಬಿಜೆಪಿ ಸೇರ್ಪಡೆ
ರಾಜ್ಯದಲ್ಲಿ ನಡೆಯಲಿರುವ ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಹಾಗೂ ನಾಲ್ಕು ಸ್ಥಾನಗಳ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ನಳೀನ್ ವಿಶ್ವಾಸ ವ್ಯಕ್ತಪಡಿಸಿದರು.