ಕೈಮಗ್ಗ ನೇಕಾರಿಕೆಗೆ ಮನಸೋತ ಅಧಿಕಾರಿ : ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಮೌರ್ಯ ಭೇಟಿ


Team Udayavani, Jan 23, 2022, 3:08 PM IST

ಕೈಮಗ್ಗ ನೇಕಾರಿಕೆಗೆ ಮನಸೋತ ಅಧಿಕಾರಿ : ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಮೌರ್ಯ ಭೇಟಿ

ಮಹಾಲಿಂಗಪುರ : ನೇಕಾರ ಕರಕುಶಲತೆ ಮತ್ತು ಕೈಮಗ್ಗ ಬಟ್ಟೆಗಳಿಗೆ ಮನಸೋತ ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ಅವರು ಶನಿವಾರ ಪಟ್ಟಣದ ಹಿರಿಯ ಕೈಮಗ್ಗ ನೇಕಾರರಾದ ಶಿವಶಂಕರ ಮೂಡಲಗಿ, ಮಲ್ಲಪ್ಪ ನಡಕಟ್ನಿ ಅವರ ಮನೆಗಳಿಗೆ ಭೇಟಿ ನೀಡಿದರು.

ಕೈಮಗ್ಗ ನೇಕಾರಿಕೆಯ ನೂಲು(ಖಂಡಕಿ) ಸುತ್ತುವುದು, ಸಂದರಕಿ ಹಾಕುವುದು, ಹಾಸು ಹೊಯ್ಯುವುದು, ವಾಡರ್‌ ಹಾಕುವುದು, ಟಾವೆಲ್‌ ನೇಯ್ಗೆ ಮಾಡುವುದನ್ನು ವೀಕ್ಷಿಸಿ ಮಾಹಿತಿ ಪಡೆದರು. ಸ್ವತಃ ತಾವೇ ಖಂಡಕಿ ಸುತ್ತಿ ಖುಷಿಪಟ್ಟರು. ಮಹಾಲಿಂಗಪ್ಪ ಸೋರಗಾಂವಿ ಅವರ ಮನೆಗೆ ಭೇಟಿ ನೀಡಿ, ಕುಣಿ ಕೈಮಗ್ಗ ವೀಕ್ಷಿಸಿ ಮಾಹಿತಿ ಪಡೆದರು.

ಸುಮಾರು 40ಕ್ಕೂ ಅಧಿಕ ಕೈಮಗ್ಗ ನೇಕಾರರಿಗೆ ಉದ್ಯೋಗ ನೀಡಿ, ಕೈಮಗ್ಗ ಉಳಿವಿಗೆ ಶ್ರಮಿಸುತ್ತಿರುವ ಪಟ್ಟಣದ ಶಿವಶಂಕರ ಮೂಡಲಗಿ ಹಾಗೂ ತಮ್ಮ 75ನೇ ವಯಸ್ಸಿನಲ್ಲಿಯೂ
ನೇಕಾರಿಕೆಯಲ್ಲಿ ತೊಡಗಿರುವ ಮಲ್ಲಪ್ಪ ನಡಕಟ್ನಿ ಅವರನ್ನು ಸನ್ಮಾನಿಸಿದರು.

ನೇಕಾರರನ್ನು ಸನ್ಮಾನಿಸಿ ಮಾತನಾಡಿದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ, ನೇಕಾರಿಕೆ ಅದೊಂದು ಅದ್ಭುತ ಕಲೆಯಾಗಿದೆ. ನೂಲಿನ ಎಳೆ ಎಳೆಗಳನ್ನು ಜೋಡಿಸಿ ಬಟ್ಟೆಗಳನ್ನು ತಯಾರಿಸುವ ಕೈಮಗ್ಗ ನೇಕಾರರ ಸಂಯಮ, ಶ್ರದ್ಧೆ, ಕಾಯಕ ನಿಷ್ಠೆ ಅಗಾಧವಾಗಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ದಾನೇಶ್ವರಿ ಕೈಮಗ್ಗ ಬಟ್ಟೆ ಉತ್ಪಾದನಾ ಘಟಕದ ಮಾಲೀಕ ಶಿವಶಂಕರ ಮೂಡಲಗಿ, ಕೈಮಗ್ಗ ನೇಕಾರಿಕೆ ಬಗ್ಗೆ ಪ್ರೀತಿ, ಅಭಿಮಾನ ಹೊಂದಿರುವ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ
ರಾಜೇಶಕುಮಾರ ಮೌರ್ಯ ಅವರ ಸರಳತೆ, ಪ್ರೊತ್ಸಾಹವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಹಿರಿಯ ಕೈಮಗ್ಗ ನೇಕಾರ ಮಲ್ಲಪ್ಪ ಮ. ನಡಕಟ್ನಿ ಮಾತನಾಡಿ, ನಮ್ಮನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು ಸನ್ಮಾನಿಸಿ-ಅಲ್ಲಿಯೇ ಒಂದು ವಾರದವರೆಗೆ ಕೈಮಗ್ಗ ಸ್ಥಾಪಿಸಿ, ನೇಕಾರಿಕೆ ಹಾಗೂ ಕೈಮಗ್ಗ ಬಟ್ಟೆಗಳನ್ನು ಪರಿಚಯಿಸಿದ್ದರು. ಈಗ ನಮ್ಮ ಮನೆಗೆ ಬಂದು ಸನ್ಮಾನಿಸಿ, ಪ್ರೊತ್ಸಾಹಿಸಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಮಹಾಲಿಂಗೇಶ್ವರ ಮಠಕ್ಕೆ ಭೇಟಿ: ನೇಕಾರರ ಮನೆಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಮಹಾಲಿಂಗೇಶ್ವರ
ಮಠದ ಪೀಠಾಧಿ ಪತಿ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಹಿರಿಯ ಕೈಮಗ್ಗ ನೇಕಾರ ಮಲ್ಲಪ್ಪ ನಡಕಟ್ನಿ ಅವರನ್ನು ಸನ್ಮಾನಿಸಿ-ಗೌರವಿಸಿದರು. ಗೋವಿಂದ ಕೆಳಕರ, ಸಂಜು ಹಳ್ಳಿ, ಮಹಾಂತೇಶ ಮೂಡಲಗಿ, ಸೋಮಶೇಖರ ಮೂಡಲಗಿ, ಈಶ್ವರ ಮಠದ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.