RGUHS Exam; “ಕಾಗದ ರಹಿತ ಪರೀಕ್ಷೆ’ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿವಿ

ದೇಶದ ವಿವಿಗಳ ಇತಿಹಾಸದಲ್ಲೇ ಭಿನ್ನ ರೀತಿಯ ಪ್ರಯೋಗ

Team Udayavani, Feb 27, 2024, 7:00 AM IST

RGUHS Exam; “ಕಾಗದ ರಹಿತ ಪರೀಕ್ಷೆ’ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿವಿ

ಬೆಂಗಳೂರು: “ಕಾಗದ ರಹಿತ ಪರೀಕ್ಷೆ’ ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಚಿತ್ತಹರಿಸಿದೆ.

ಮಾರ್ಚ್‌ನಲ್ಲಿ ಈ ಸ್ವರೂಪದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಅದಕ್ಕಾಗಿಯೇ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ “ಡಿಜಿ ಟಲ್‌ ವ್ಯಾಲ್ಯೂವೇಷನ್‌’ ಮೂಲಕ ಚರಿತ್ರೆ ನಿರ್ಮಿಸಿರುವ ವಿವಿ ಈಗ ಕಾಗದ ರಹಿತ ಪರೀಕ್ಷೆ ಮೂಲಕ ದೇಶದ ವಿವಿಗಳ ಇತಿಹಾಸದಲ್ಲೇ ಭಿನ್ನ ರೀತಿಯ ಪ್ರಯೋಗಕ್ಕೆ ಹೆಜ್ಞೆ ಇರಿಸಿದೆ.

ಫೆಲೋಶಿಫ್ ಮತ್ತು ಫಿಸಿಯೋಥೆರಪಿ ವಿಭಾಗದಲ್ಲಿ ಕಾಗದ ರಹಿತ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಂತೆ ಉತ್ತರಗಳು ಸರ್ವರ್‌ಗೆ ಅಪ್‌ಲೋಡ್‌ ಆಗಲಿವೆ. ಪ್ರಶ್ನೆ ಪತ್ರಿಕೆಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಆದರೆ ಇಲ್ಲಿ ಟ್ಯಾಬ್‌ ಅನ್ನು ಬಳಸಲಾಗುತ್ತಿದೆ. ಈಗಾಗಲೇ ನಿಮ್ಹಾನ್ಸ್‌ನಲ್ಲಿ ಸೀಮಿತ ಕೋರ್ಸ್‌ ಗಳಿಗೆ ಕಾಗದ ರಹಿತ ಪರೀಕ್ಷೆ ನಡೆಯುತ್ತಿದೆ. ಅದೇ ಮಾದರಿಯನ್ನು ರಾಜೀವ್‌ಗಾಂಧಿ ವಿವಿ ಬಳಸಲಿದೆ.

ಪರೀಕ್ಷೆ ದಿನದಂದು
ಮಾತ್ರ ಟ್ಯಾಬ್‌ ಸಕ್ರಿಯ
ಈ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್‌ ನೀಡಲಾಗುತ್ತದೆ. ಟ್ಯಾಬ್‌ ಅನ್ನು ವಿದ್ಯಾರ್ಥಿಗಳೇ ಖರೀದಿಸಬೇಕೋ, ಆಯಾ ಕಾಲೇಜುಗಳು ಅಥವಾ ವಿವಿ ಪೂರೈಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಕೋರ್ಸ್‌ ಮುಗಿಯುವರೆಗೂ ಆ ಟ್ಯಾಬ್‌ ವಿದ್ಯಾರ್ಥಿಯಲ್ಲಿ ಇರಲಿದೆ. ಪರೀಕ್ಷೆ ವೇಳೆ ಮಾತ್ರ ಟ್ಯಾಬ್‌ ಬಳಸಲಾಗುತ್ತದೆ ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ| ಎಂ.ಕೆ.ರಮೇಶ್‌ ಮಾಹಿತಿ ನೀಡಿದ್ದಾರೆ.

ಪರೀಕ್ಷೆಯ ದಿನದಂದು ಮಾತ್ರ ಟ್ಯಾಬ್‌ ಅನ್ನು ಸಕ್ರಿಯಗೊಳಿಸಲಾಗುತ್ತದೆ. ಪ್ರತ್ಯೇಕ ಪಿನ್‌ ಕೂಡ ನೀಡಲಾಗುವುದು. ಟ್ಯಾಬ್‌ಗಳ ಬಳಕೆ ಖರ್ಚು ಬಗ್ಗೆ ಇನ್ನೂ ಲೆಕ್ಕಹಾಕಿಲ್ಲ ಎಂದು ತಿಳಿಸಿದ್ದಾರೆ.

ಪ್ರಾಯೋಗಿಕವಾಗಿ 2 ಸಾವಿರ ವಿದ್ಯಾರ್ಥಿಗಳ ಬಳಕೆಕಾಗದ ರಹಿತ ಪರೀಕ್ಷೆಯ ಪ್ರಾಯೋಗಿಕ ಹಂತದಲ್ಲಿ 2 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಫೆಲೋಶಿಫ್ ವಿಭಾಗದ 180 ಮತ್ತು ಪಿಸಿಯೋಥೆರಪಿ ವಿಭಾಗದ 1,820 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಟ್ಯಾಬ್‌ನಲ್ಲಿ ವಿಶೇಷ ಅಪ್ಲಿಕೇಶನ್‌ಗಳನ್ನು ಅಳವಡಿಸಲಾಗುವುದು. ಕಾಗದ ಉಳಿಸುವ ಉದ್ದೇಶವೂ ಇದರಲ್ಲಿ ಸೇರಿದೆ ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಕುಲಸಚಿವ ಪಿ.ಆರ್‌.ಶಿವಪ್ರಸಾದ್‌ ಹೇಳಿದರು.

ಪ್ರಯೋಗ ಹಂತವಾಗಿರುವ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕೆ ಕೈಗೊಳ್ಳಲಾಗುವುದು. ಡಿಜಿಟಲ್‌ ಮೌಲ್ಯಮಾಪನ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈಗಾಗಲೇ ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಮುಂತಾದ ಹಲವು ರಾಜ್ಯಗಳ ವಿವಿಗಳು ಡಿಜಿಟಲ್‌ ಮೌಲ್ಯಮಾಪನ ಬಗ್ಗೆ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.

ಉತ್ತರ ಪತ್ರಿಕೆಗಾಗಿಯೇ ಪ್ರತಿ ವರ್ಷ 8 ಕೋಟಿ ರೂ.ಖರ್ಚು
ಪ್ರತಿ ವರ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಾಗಿಯೇ ವಿವಿ ಸುಮಾರು 7-8 ಕೋಟಿ ರೂ. ಖರ್ಚು ಮಾಡುತ್ತದೆ. ಕಾಗದ ರಹಿತ ಪರೀಕ್ಷೆಯಿಂದಾಗಿ ಈ ಹಣ ಉಳಿತಾಯವಾಗಲಿದೆ. ವಿದ್ಯಾರ್ಥಿಗಳ ನಾಲ್ಕು ವರ್ಷದ ಕೋರ್ಸ್‌ ಮುಗಿಸಿದ ತತ್‌ಕ್ಷಣ ಟ್ಯಾಬ್‌ ಅನ್ನು ಮರುಬಳಕೆ ಕೂಡ ಮಾಡಬಹುದಾಗಿದೆ ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ| ಎಂ.ಕೆ.ರಮೇಶ್‌ ತಿಳಿಸಿದ್ದಾರೆ. ಇದರ ಜತೆಗೆ ಆರ್ಟಿಫಿಶಿಯಲ್‌ ಇಂಟೆಲಿಜೆಂಟ್‌ (ಕೃತಕ ಬುದ್ಧಿಮತ್ತೆ) ಅನ್ನು ಕೂಡ ಪರೀಕ್ಷೆ ವೇಳೆ ಬಳಕೆಗೆ ಆಲೋಚಿಸಲಾಗಿದೆ. ಹೊರಗಡೆಯಿಂದ ಯಾರಾದರೂ ಪರೀಕ್ಷೆ ಬರೆಯುವವರಿಗೆ ಸಹಾಯ ಮಾಡುತ್ತಿದ್ದರೆ, ಆ ವಿದ್ಯಾರ್ಥಿಗಳ ಚಲನವಲನಗಳ ಮೂಲಕ ಕೃತಕ ಬುದ್ಧಿಮತ್ತೆ ಮಾಹಿತಿ ನೀಡಲಿದೆ. ಪರೀಕ್ಷೆಗಳ ಪಾವಿತ್ರ್ಯ ಉಳಿಯಬೇಕು ಎಂಬುದಷ್ಟೇ ನಮ್ಮ ಉದ್ದೇಶವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.