ಸೀಬರ್ಡ್ ನೌಕಾನೆಲೆಗೆ ರಾಜನಾಥ್ ಸಿಂಗ್ ಭೇಟಿ
Team Udayavani, May 27, 2022, 6:45 AM IST
ಕಾರವಾರ: ದೇಶದ ಸ್ವಾಭಿಮಾನ ರಕ್ಷಿಸುವಲ್ಲಿ ರಕ್ಷಣ ಪಡೆಗಳ ಪಾತ್ರ ದೊಡ್ಡದು ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ ಸಿಂಗ್ ಹೇಳಿದರು.
ಕಾರವಾರದ ಸೀಬರ್ಡ್ ನೌಕಾನೆಲೆ ಭೇಟಿಗೆ ಆಗಮಿಸಿರುವ ಅವರು ನೌಕಾನೆಲೆ ಸಿಬಂದಿ ಹಾಗೂ ಕುಟುಂಬದವರ ಜತೆ ಮಾತನಾಡಿ, ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ದೊಡ್ಡದಾಗಿದೆ. ದೇಶಕ್ಕಾಗಿ ತ್ಯಾಗ ಮಾಡುವ ಅವರನ್ನು ಸದಾ ಗೌರವಿಸಬೇಕು ಎಂದರು.
ಸೈನಿಕರಲ್ಲಿ ಕರ್ತವ್ಯಪ್ರಜ್ಞೆ ಹೆಚ್ಚಾಗಿರುತ್ತದೆ. ಭಾರತ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಲು ನಮ್ಮ ಸೈನ್ಯದ ಕೊಡುಗೆ ಅಪಾರ. ಸೈನಿಕರು ತಮ್ಮ ಕುಟುಂಬವನ್ನು ಮರೆತು ಸದಾ ದೇಶಸೇವೆಯಲ್ಲಿ ತೊಡಗಿರುತ್ತಾರೆ. ಹಿಂದೊಮ್ಮೆ ನನಗೆ ಜಲಾಂತರ್ಗಾಮಿಯಲ್ಲಿ ಹೋಗುವ ಅವಕಾಶ ಒದಗಿ ಬಂದಿತ್ತು. ಅಲ್ಲಿ ಜೀವನ ಅತ್ಯಂತ ಕಠಿನವಾಗಿದ್ದು, ನೀರನ್ನು ಮಿತವಾಗಿ ಅಳೆದು ಬಳಸಬೇಕು. ಇಂತಹ ಸ್ಥಿತಿಯಲ್ಲಿ ಸೈನಿಕರು ತಿಂಗಳುಗಟ್ಟಲೇ ಕುಟುಂಬದಿಂದ ದೂರವಿರುತ್ತಾರೆ. ಎಲ್ಲಿ ನೋಡಿದರಲ್ಲಿ ನೀರು. ಮಾತನಾಡಲು ಬೇರೇನೂ ಇಲ್ಲದೆ ಸಮುದ್ರದ ಅಲೆಯ ಶಬ್ದವನ್ನೇ ಕೇಳುತ್ತಿರುತ್ತಾರೆ. ಇದು ಕಷ್ಟಸಾಧ್ಯ ಎಂದು ಹೇಳಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಭಾರತವನ್ನು ಇತರೆ ದೇಶಗಳು ನೋಡುವ ರೀತಿಯೇ ಬದಲಾಗಿದೆ. ಭಾರತ ಇಂದು ಜಗತ್ತಿನ ಪ್ರಭಾವಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತಕ್ಕೆ ಜಗತ್ತಿನಲ್ಲಿ ಎಲ್ಲರಿಗಿಂತಲೂ ಹೆಚ್ಚು ಗೌರವ ಸಿಗುತ್ತಿದೆ ಎಂದೂ ಹೇಳಿದರು.
ಸೀಬರ್ಡ್ ನೌಕಾನೆಲೆಗೆ ಕದಂಬ ರಾಜಮನೆತನದ ಹೆಸರನ್ನಿಡಲಾಗಿದೆ. ಭಾರತದ ಇತಿಹಾಸದಲ್ಲಿ ಕದಂಬರದ್ದು ಅತ್ಯಂತ ಸುವರ್ಣಾಕ್ಷರಗಳಿಂದ ಬರೆದಿಡುವ ಕಾಲ. ಕದಂಬ ನೌಕಾನೆಲೆ ಕದಂಬರ ನಾಡಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಅತ್ಯಂತ ಸಂತಸದ ವಿಷಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್