ರಾಜ್ಯಸಭೆ ಚುನಾವಣೆ: ಜೆಡಿಎಸ್‌ ಶಸ್ತ್ರತ್ಯಾಗ; ಕುಪೇಂದ್ರ ರೆಡ್ಡಿ ಏಕಾಂಗಿ?


Team Udayavani, Jun 6, 2022, 7:25 AM IST

ರಾಜ್ಯಸಭೆ ಚುನಾವಣೆ: ಜೆಡಿಎಸ್‌ ಶಸ್ತ್ರತ್ಯಾಗ; ಕುಪೇಂದ್ರ ರೆಡ್ಡಿ ಏಕಾಂಗಿ?

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮೂರು ಪಕ್ಷಗಳ ತಂತ್ರ-ಪ್ರತಿತಂತ್ರಗಳ ಮುಂದುರಿದಿದೆ. ಆದರೆ, ಜೆಡಿಎಸ್‌ “ಶಸ್ತ್ರತ್ಯಾಗ’ ಮಾಡಿದಂತೆ ಕಂಡು ಬರುತ್ತಿದೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮರಸ್ವಾಮಿ “ತಟಸ್ಥ’ರಾದಂತೆ ಕಂಡು ಬರುತ್ತಿದ್ದು, ಅಭ್ಯರ್ಥಿ ಕುಪೇಂದ್ರ ರೆಡ್ಡಿ “ಏಕಾಂಗಿ’ಯಾದಂತೆ ಕಾಣುತ್ತಿದೆ.

ಆರಂಭದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಮಾತನಾಡಿದರು. ಸೋನಿಯಾ ಗಾಂಧಿ ಜೊತೆ ಸಂಧಾನಕ್ಕೆ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಹೋಗಿದ್ದರು. ಇದಲ್ಲದೇ ಪ್ರಧಾನಿ ಮೋದಿಯವರೊಂದಿಗೂ ದೇವೇಗೌಡರು ಮಾತನಾಡಿದರು ಎಂದೆಲ್ಲಾ ಹೇಳಲಾಯಿತು.

ಕಾಂಗ್ರೆಸ್‌ ಎರಡನೇ ಅಭ್ಯರ್ಥಿ, ಬಿಜೆಪಿ ಮೂರನೇ ಅಭ್ಯರ್ಥಿ ಹಾಕಿದ ಮೇಲೆ ಜೆಡಿಎಸ್‌ ಲೆಕ್ಕಾಚಾರ ಉಲ್ಟಾ ಆಯಿತು. ಕಾಂಗ್ರೆಸ್‌ 2ನೇ ಅಭ್ಯರ್ಥಿಯನ್ನು ವಾಪಸ್‌ ಪಡೆಯಲಿದೆ ಎಂಬ ವಿಶ್ವಾಸವೂ ಹುಸಿಯಾಯಿತು.

ಕಳೆದರೆಡು ದಿನಗಳಿಂದ ದೇವೇಗೌಡರು ಮೌನವಾಗಿದ್ದಾರೆ. ವಿದೇಶ ಪ್ರವಾಸದಿಂದ ವಾಪಸ್‌ ಆಗಿರುವ ಕುಮಾರಸ್ವಾಮಿ, ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ ಪ್ರವಾಸದಲ್ಲಿದ್ದರು. ರಾಜ್ಯಸಭಾ ಚುನಾವಣೆ ಬಗ್ಗೆ ಅವರು ಹೆಚ್ಚು ಮಾತನಾಡಲೂ ಇಲ್ಲ. ಇದು ಜೆಡಿಎಸ್‌ ಅಭ್ಯರ್ಥಿಯಲ್ಲಿ ನಿರಾಸೆ ಮೂಡಿಸಿದಂತಿದೆ. ಜಾತ್ಯಾತೀತ ತತ್ವದ ಆಧಾರದಲ್ಲಿ ಆತ್ಮಸಾಕ್ಷಿ ಮತವನ್ನು ಕೇಳುತ್ತೇವೆ ಎಂದು ಜೆಡಿಎಸ್‌ ಮುಖಂಡರು ಹೇಳುತ್ತಿದ್ದಾರೆ.

ಆದರೆ, ಆತ್ಮಸಾಕ್ಷಿ ಮತಗಳು ತಮಗೆ ಬೀಳುವ ಬಗ್ಗೆ ಸ್ವತಃ ಅಭ್ಯರ್ಥಿಯೇ ಆತ್ಮವಿಶ್ವಾಸ ಹೊಂದಿದಂತಿಲ್ಲ. ಈ ಹಂತದಲ್ಲಿ ಪ್ರಯತ್ನವಷ್ಟೇ ಮಾಡಬಹುದು. ಆದರೆ ಫ‌ಲ ಸಿಗುತ್ತೆ ಎಂದು ಹೇಳಲಿಕ್ಕಾಗುವುದಿಲ್ಲ. ಏನೇ ತಂತ್ರಗಳಿದ್ದರೂ ಮೊದಲೇ ಮಾಡಿಕೊಳ್ಳಬೇಕಾಗುತ್ತದೆ ಎಂದು ಸ್ವತಃ ಅಭ್ಯರ್ಥಿಯೇ ಹೇಳುತ್ತಾರೆ.

ಭರವಸೆ ಹೇಗೆ ಇಟ್ಟುಕೊಳ್ಳುವುದು, ಎಲ್ಲರೂ ಪ್ರತಿಷ್ಠೆಗೆ ಬಿದ್ದಿದ್ದಾರೆ. ಬಿಜೆಪಿ-ಕಾಂಗ್ರೆಸ್‌ ಇಬ್ಬರೂ ಜೆಡಿಎಸ್‌ಗೆ ಓಟ್‌ ಹಾಕಲ್ಲ. ಜೆಡಿಎಸ್‌ ಆ ಎರಡೂ ಪಕ್ಷಗಳಿಗೆ ಓಟ್‌ ಹಾಕಲ್ಲ. ಇದರಿಂದ ಯಾರಿಗೆ ಲಾಭ ಆಗಲಿದೆ ಎಂದು ಬಿಡಿಸಿ ಹೇಳಬೇಕಾಗಿಲ್ಲ. ಎರಡನೇ ಪ್ರಾಶಸ್ತ್ಯದ ಮತ, ಆತ್ಮ ಸಾಕ್ಷಿ ಮತ, ಅಡ್ಡ ಮತದಾನ ಇವು ಲೆಕ್ಕಾಚಾರಗಳಷ್ಟೇ ಎಂದು ಕೆಲ ಜೆಡಿಎಸ್‌ ಮುಖಂಡರು ಹೇಳುತ್ತಾರೆ.

“ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಕಾಂಗ್ರೆಸ್‌-ಬಿಜೆಪಿಯಲ್ಲಿ ಅನೇಕರು ನಮಗೆ ಸಮಾನ ಮನಸ್ಕರು ಇದ್ದಾರೆ. ದೇವೇಗೌಡರು, ಕುಮಾರಸ್ವಾಮಿಯವರು ಏನು ಮಾಡಬೇಕು, ಏನು ಹೇಳಬೇಕು ಎಲ್ಲಾ ಮಾಡಿದ್ದಾರೆ. ಈಗ ಎಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ’.
– ಟಿ.ಎ ಶರವಣ, ವಿಧಾನಪರಿಷತ್‌ ಸದಸ್ಯ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.