ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ ಪರ ಸಾವಿರ ಶಿಫಾರಸು!
Team Udayavani, Oct 28, 2021, 5:43 AM IST
ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಹರಿಗೆ ನೀಡುವ ಸಲುವಾಗಿ ರಾಜ್ಯ ಸರಕಾರ ಜನರಿಂದಲೇ ಶಿಫಾರಸು ಆಹ್ವಾನಿಸಿತ್ತು. ಆದರೆ ಒಂದೇ ಸಂಸ್ಥೆಯ ಪರವಾಗಿ 1 ಸಾವಿರಕ್ಕೂ ಹೆಚ್ಚು ಶಿಫಾರಸುಗಳು ಬಂದಿದ್ದು, ಸರಕಾರವೇ ಬೆಚ್ಚಿ ಬೀಳುವಂತೆ ಮಾಡಿದೆ.
ಕೆಲವು ವ್ಯಕ್ತಿಗಳ ಪರವೂ ಭರಪೂರ ಶಿಫಾರಸುಗಳು ಬಂದಿವೆ. “ಇಂಥವರಿಗೆ’ ಪ್ರಶಸ್ತಿ ಕೊಡಿ ಎಂದು ದಾಖಲೆಗಳ ಸಮೇತ 200 – 300 ಶಿಫಾರಸುಗಳು ಸೇವಾ ಸಿಂಧು ಮೂಲಕ ಸಲ್ಲಿಕೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿವೆ.
ಈ ಬಾರಿ ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಸಾರ್ವಜನಿಕರೇ ಗುರುತಿಸಿ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕರೆ ನೀಡಿದ್ದರು.
ಇದನ್ನೂ ಓದಿ:ಗಪ್ಟಿಲ್ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ
28 ಸಾವಿರ ಶಿಫಾರಸು
ಪ್ರತೀ ವರ್ಷ ಐದರಿಂದ ಆರು ಸಾವಿರ ಜನರು ಅರ್ಜಿ ಸಲ್ಲಿಸುತ್ತಿದ್ದರೆ ಈ ವರ್ಷ 28 ಸಾವಿರ ಶಿಫಾರಸುಗಳು ಬಂದಿವೆ ಎನ್ನಲಾಗಿದೆ.
ನಾಳೆ ಅಂತಿಮ ಪಟ್ಟಿ
ಶುಕ್ರವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ಅಂತಿಮ 65 ಜನ ಸಾಧಕರ ಪಟ್ಟಿ ಸಿದ್ಧಗೊಳಿಸಲಾಗುವುದು ಎಂದು ತಿಳಿದು ಬಂದಿದೆ. ಅ. 30ರ ಸಂಜೆ ಪ್ರಶಸ್ತಿ ಪುರಸ್ಕೃತರ ಅಧಿಕೃತ ಪಟ್ಟಿಯನ್ನು ಸಚಿವ ಸುನಿಲ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ