ರಕ್ಷಾ ಬಂಧನ: ಗೃಹ ಸಚಿವರಿಗೆ ರಾಖಿ ಕಟ್ಟಿದ ಮಹಿಳಾ ಕಾನ್ ಸ್ಟೇಬಲ್ಸ್
Team Udayavani, Aug 11, 2022, 12:37 PM IST
ಬೆಂಗಳೂರು: ಸೋದರ- ಸೋದರಿಯರ ನಡುವಿನ ಬಾಂಧವ್ಯದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ, ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಣೆಯಾಗುತ್ತಿದೆ. ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮಹಿಳಾ ಕಾನ್ಸ್ಟೇಬಲ್ಗಳಿಬ್ಬರು ರಕ್ಷಾ ಬಂಧನ ಕಟ್ಟಿದರು.
“ನಿನ್ನೆ ಇಬ್ಬರು ಮಹಿಳಾ ಕಾನ್ಸ್ಟೇಬಲ್ಗಳು ರಾಖಿ ಕಟ್ಟಿ ಶುಭ ಕೋರಿದರು. ಅವರಿಗೂ ರಕ್ಷಾಬಂಧನದ ಶುಭಾಶಯ ಕೋರಲಾಯಿತು’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹಂಚಿಕೊಂಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ರಕ್ಷಣೆಯ ಮತ್ತು ಸಹೋದರತ್ವದ ಸಂಕೇತದ ಹಬ್ಬವಾಗಿರುವ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು. ಹರಸಿ, ಆಶೀರ್ವದಿಸಿ, ಆರೈಕೆ ಮಾಡಿ ಧೈರ್ಯವನ್ನು ತುಂಬುವ ಸಹೋದರಿಯರ ಕಾಳಜಿ ಮತ್ತು ಕನಿಕರ ನಿಜಕ್ಕೂ ಅವಿಸ್ಮರಣೀಯವಾದದ್ದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿ ಶುಭ ಕೋರಿದ್ದಾರೆ.
ಅಣ್ಣ-ತಮ್ಮ ಅಂತ ಕರೆಯಲು ರಕ್ತ ಹಂಚಿಕೊಂಡು ಹುಟ್ಟಿರಬೇಕು ಅಂತ ಏನಿಲ್ಲ. ಮನಸ್ಸಿನ ಭಾವನೆಯಿಂದ ಕರೆಯುವ ಪ್ರತಿಯೊಬ್ಬರು ಸಹೋದರ- ಸಹೋದರಿಯರೇ ಆಗಿರುತ್ತಾರೆ. ಕನಸುಗಳು ನೂರಿರಲಿ, ಸಂರಕ್ಷಣೆ ಹೊಣೆ ನನಗಿರಲಿ ಎಂಬ ಸಂದೇಶ ಸಾರುವ ಸಹೋದರತೆಯ ಸಂಭ್ರಮದ ಹಬ್ಬಕ್ಕೆ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು’ ಎಂದಿದ್ದಾರೆ ಸಚಿವ ಮುರುಗೇಶ್ ನಿರಾಣಿ.
ನಾಡಿನ ಸಮಸ್ತ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಭ್ರಾತೃತ್ವ, ಸಾಮಾಜಿಕ ಸಾಮರಸ್ಯದ ಪ್ರತೀಕವಾಗಿ ಆಚರಿಸಲ್ಪಡುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಪ್ರಾರ್ಥಿಸುವೆ’ ಎಂದು ಅಶ್ವಥ್ ನಾರಾಯಣ್ ಅವರು ಕೂ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ