ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ನೇಮಕ
Team Udayavani, Jan 20, 2021, 4:33 PM IST
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮಾಜಿ ಸಂಸದ ಧ್ರುವ ನಾರಾಯಣ ಅವರನ್ನು ಎಐಸಿಸಿ ನೇಮಿಸಿದೆ. ಇದರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ತಂಡದಲ್ಲಿ ಐದು ಮಂದಿಯನ್ನು ನೇಮಿಸಿದಂತಾಗಿದೆ.
ಕೆಪಿಸಿಸಿಯಲ್ಲಿ ಈಗಾಗಲೇ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಸಲೀಂ ಅಹಮದ್ ಅವರು ಕಾರ್ಯಾಧ್ಯಕ್ಷರಾಗಿದ್ದು, ಅವರ ಜೊತೆ ಇನ್ನಿಬ್ಬರನ್ನು ನೇಮಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರ ತಡೆ: ಡಿಕೆಶಿ, ಸಿದ್ದರಾಮಯ್ಯ ಪೊಲೀಸ್ ವಶಕ್ಕೆ
ಪಕ್ಷ ಸಂಘಟನೆ ಮತ್ತು ಜಾತಿ ಸಮುದಾಯದ ಲೆಕ್ಕಾಚಾರದಲ್ಲೂ ಈ ನೇಮಕ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕು: ಬಿಎಸ್ ವೈ ವಿರುದ್ಧ ಮತ್ತೆ ಯತ್ನಾಳ್ ಆಕ್ರೋಶ