ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ಇಲ್ಲ ; ಪುತ್ರಿ ತೀವ್ರ ಅಸಮಾಧಾನ
Team Udayavani, Dec 22, 2018, 10:00 AM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳಾಗಿದ್ದವರ ಅಸಮಾಧಾನ ಭುಗಿಲೆದ್ದಿದೆ. ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದುದಕ್ಕೆ ಪುತ್ರಿ ಸೌಮ್ಯ ರೆಡ್ಡಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ಟ್ವೀಟರ್ನಲ್ಲಿ ಪತ್ರವೊಂದನ್ನು ಪೋಸ್ಟ್ ಮಾಡಿರುವ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷ ನನಗೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್ ನೀಡಿದ್ದು ಮತದಾರರು ನನಗೆ ಆಶೀರ್ವದಿಸಿದ್ದಾರೆ. ಜಯನರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಬೇಕಾಗಿದೆ. ನನಗೀಗ ಯಾವ ರೀತಿಯ ಪಾರ್ಲಿಮೆಂಟರಿ ಸಕ್ರೆಟರಿ ಹಾಗೂ ಯಾವುದೇ ರೀತಿಯ ಹುದ್ದೆ ಬೇಡ.
ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಸ್ವಲ್ಪ ಹಿಂದೇಟು ಆಗುವುದು ಖಂಡಿತ ಅದು ರಾಜಕೀಯದ ಒಂದು ಭಾಗ, ಆದರೆ ಈ ರೀತಿ ಪಕ್ಷಕ್ಕೆ ನಿಷ್ಠೆಯಾದವರಿಗೆ ಹಿಂದೇಟು ಆದರೆ ಬೇಸರವಾಗುತ್ತದೆ.
ನಾನು ಮೊದಲನೆ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ ಇನ್ನೂ ನನ್ನ ಕ್ಷೇತ್ರದ ಹಲವಾರು ಕೆಲಸಗಳನ್ನು ಮಾಡಲು ನನಗೆ ಬಹಳ ಸಮಯ ಬೇಕಾಗಿದೆ. ನನಗೆ ಪಾರ್ಲಿಮೆಂಟ್ ಸಕ್ರೆಟರಿ ಸ್ಥಾನ ನೀಡಿರುವುದು ಸದ್ಯಕ್ಕೆ ಬೇಡ ಯಾರಿಗೆ ಅವಶ್ಯಕತೆ ಇದೆ ಅವರಿಗೆ ಕೊಡಿ.ನನಗೆ ನನ್ನ ಕ್ಷೇತ್ರದ ಜನರ ಋಣ ತೀರಿಸಬೇಕಾಗಿದೆ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ.ಕೇವಲ 1 ಶಾಸಕರಿಂದ ಈಗ ಬೆಂಗಳೂರಿನಲ್ಲಿ ಹದಿನೈದಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನ ಎಲ್ಲಾ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ . ಇಂತಿ ಸೌಮ್ಯ ರೆಡ್ಡಿ ಎಂದು ಬರೆದಿದ್ದಾರೆ.
ರೊಚ್ಚಿಗೆದ್ದ ಬೆಂಬಲಿಗರು
ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಬೆಂಬಲಿಗರು ತೀವ್ರ ಆಕ್ರೋಶಗೊಂಡಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!