ಮಾನದಂಡವೇ ಸರಿಯಿಲ್ಲ:ಕೈ ನಾಯಕರ ವಿರುದ್ಧ ರಾಮಲಿಂಗಾ ರೆಡ್ಡಿ ಆಕ್ರೋಶ
Team Udayavani, Dec 23, 2018, 1:30 PM IST
ಬೆಂಗಳೂರು: ಸಚಿವ ಸಂಪುಟಕ್ಕೆ ಕಾಂಗ್ರೆಸ್ ನಾಯಕರು ಆಯ್ಕೆ ಮಾಡಿದ ಮಾನದಂಡವೇ ಸರಿಯಿಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ,ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾನುವಾರ ತೀವ್ರ ಆಸಮಧಾನ ಹೊರ ಹಾಕಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾ ರೆಡ್ಡಿ ನನಗೆ ಯಾರ ವಿರುದ್ಧವೂ ವೈಯಕ್ತಿಕ ಬೇಸರ ಇಲ್ಲ. ಪಕ್ಷ ಸಚಿವ ಸ್ಥಾನ ನೀಡಲು ಪರಿಗಣಿಸಿದ ಮಾನದಂಡದ ಬಗ್ಗೆ ಬೇಸರ ಇದೆ . ಆರ್.ವಿ.ದೇಶ್ಪಾಂಡೆ, ಕೆ.ಜೆ.ಜಾರ್ಜ್,ಡಿ.ಕೆ.ಶಿವಕುಮಾರ್, ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್ ಇವರೆಲ್ಲಾ ಹಿರಿಯರು ಪಕ್ಷಕ್ಕೆ ಅವರ ಸೇವೆ ಅಗತ್ಯವಾಗಿ ಬೇಕು ಮತ್ತು ಸಂಪುಟದಲ್ಲಿ ಅವರ ಹಿರಿತನ ಕಾಣಬೇಕು. ಅವರಿಗೆ ಕೊಟ್ಟಿದ್ದಕ್ಕೆ ನನಗೆ ಬೇಸರ ಇಲ್ಲ. ಅವರಿಗೊಂದು ನ್ಯಾಯ, ನನಗೊಂದು ನ್ಯಾಯ ಯಾಕೆ ಎಂದು ಪ್ರಶ್ನಿಸಿದರು.
ನಾನು ಇದುವರೆಗೆ ಯಾರಿಗೂ ಹೊಗಳಿಯೂ ಇಲ್ಲ, ತೆಗಳಿಯೂ ಇಲ್ಲ .ನನಗೆ ಸಚಿವ ಸ್ಥಾನ ಕೈ ತಪ್ಪಿ ಹೋಗಲು ಒಬ್ಬರು ಪ್ರಮುಖ ಕಾರಣವಾಗಿದ್ದಾರೆ, ಅವರ ಹೆಸರು ಈಗ ಹೇಳುವುದಿಲ್ಲ , ಸಮಯ ಬಂದಾಗ ಹೇಳುತ್ತೇನೆ ಎಂದರು.
ಹೈಕಮಾಂಡ್ಗೆ ನಾಲ್ವರು ಪ್ರಮುಖರು ಇಲ್ಲಿನ ವಿಚಾರಗಳನ್ನು ತಿಳಿಸುತ್ತಾರೆ, ಅವರು ಕೂಡ ನನ್ನ ಬಗ್ಗೆ ತಿಳಿಸಿಲ್ಲ ಅವರ ಹೆಸರುಗಳನ್ನೆಲ್ಲಾ ನಾನು ಹೇಳುವುದಿಲ್ಲ ಎಂದರು.
ನಮ್ಮ ಪಕ್ಷದವರೇ ನನ್ನ ಬಳಿ ಮಾತನಾಡಿಲ್ಲ, ಇನ್ನು ಬೇರೆ ಪಕ್ಷದವರು ಯಾಕೆ ಸಂಪರ್ಕ ಮಾಡುತ್ತಾರೆ ಎಂದರು.
ನನ್ನ ಮಗಳೂ ಟ್ವೀಟ್ ಮಾಡುವ ಮುನ್ನ ನನ್ನ ಅಭಿಪ್ರಾಯ ಕೇಳಿರಲಿಲ್ಲ. ಬೆಂಬಲಿಗರಿಗೆ ಪ್ರತಿಭಟನೆ ಮಾಡಲು ಹೇಳಿರಲಿಲ್ಲ ಎಂದರು.
ನನ್ನ ಮುಂದಿನ ಗುರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರುವುದು. ನನ್ನ ಕೈಲಾದಷ್ಟು ಪಕ್ಷಕ್ಕೆ ದುಡಿದಿದ್ದೇನೆ ಮುಂದೆಯೂ ದುಡಿಯುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!