Ramanagara:ಬೆಟ್ಟದ ತಪ್ಪಲಿನಲ್ಲಿ ಬೆಂಗಳೂರಿನ ವ್ಯಕ್ತಿಯ ಸಂಪೂರ್ಣ ಕೊಳೆತ ಶವ ಪತ್ತೆ
ಡಿ.31 ರಂದು ಹತ್ಯೆಗೈದು ಎಸೆಯಲಾಗಿತ್ತು...ಮೃತ ದೇಹವನ್ನು ತಿಂದ ಚಿರತೆ!!
Team Udayavani, Jan 9, 2024, 7:11 PM IST
ರಾಮನಗರ: ತಾಲೂಕಿನ ಕೂಟಗಲ್ ಬೆಟ್ಟದ ತಪ್ಪಲಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರ ಶವ ಮಂಗಳವಾರ ಪತ್ತೆಯಾಗಿದೆ.
ಶವವಾಗಿ ಪತ್ತೆಯಾದ ವ್ಯಕ್ತಿ ಜ್ಞಾನ ಭಾರತಿ ಮೂಲದ ವ್ಯಕ್ತಿ ಗುರುಸಿದ್ದಪ್ಪ ಎಂದು ಪೊಲೀಸರು ಗುರುತಿಸಿದ್ದಾರೆ.
ಡಿ. 31 ರಂದು ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಡಿ.31 ರಂದೇ ಬೆಂಗಳೂರಿನಲ್ಲಿ ಕೊಲೆ ಮಾಡಿ ಕೂಟಗಲ್ ಬೆಟ್ಟದ ಬಳಿ ಶವ ಎಸೆಯಲಾಗಿತ್ತು. ಪ್ರಕರಣ ಬೇಧಿಸಿದ ಪೊಲೀಸರಿಗೆ ಕೂಟಗಲ್ ಬೆಟ್ಟದಲ್ಲಿ ಗುರುಸಿದ್ದಪ್ಪ ಶವ ಪತ್ತೆಯಾಗಿದೆ.
ರಾಮನಗರ ಗ್ರಾಮಾಂತರ, ಜ್ಞಾನ ಭಾರತಿ ಠಾಣಾ ಪೊಲೀಸರಿಂದ ಸ್ಥಳ ಮಹಜರು ಮಾಡಲಾಗಿದ್ದು, ಮೃತ ದೇಹವನ್ನು ಚಿರತೆ ತಿಂದಿದ್ದು,ಉಳಿದ ಭಾಗ ಸಂಪೂರ್ಣ ಕೊಳೆತು ಮೂಳೆಯಾಗಿ ಪತ್ತೆಯಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರಗೆ ಕೊಳೆತ ಮೃತದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ