ಸಿದ್ದು ನಾಯಕ ಎಂದ ರಮೇಶ್ಗೆ ತಿರುಗೇಟು
Team Udayavani, Dec 18, 2019, 3:04 AM IST
ಶಿವಮೊಗ್ಗ: ಬಿಜೆಪಿ ಒಂದು ರೀತಿಯಲ್ಲಿ ನಮಗೆ ತಾಯಿ ಇದ್ದ ಹಾಗೆ. ಇಲ್ಲಿಗೆ ಬಂದವರು, ನಮ್ಮ ಸಂಸ್ಕೃತಿಯನ್ನು ಮೆಚ್ಚಿ ಇರಬೇಕಾಗುತ್ತದೆ. ಅದನ್ನು ಬಿಟ್ಟು ಏನೇನೋ ಹೇಳಿದ್ರೆ ಅದು, ತಾಯಿಗೆ ಮಾಡುವ ದ್ರೋಹ.. ಹೀಗೆಂದು “ಮಾಜಿ ಸಿಎಂ ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರು’ ಎಂದು ಹೇಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ನೀಡಿದ ತಿರುಗೇಟು.
ನಗರದಲ್ಲಿ ನಡೆದ ಜಿಲ್ಲಾ ಸಮಿತಿ ವಿಶೇಷ ಸಭೆಯಲ್ಲಿ ಮಾತನಾಡಿ, ಯಾರೇ ಹೊಸದಾಗಿ ಪಕ್ಷಕ್ಕೆ ಸೇರ್ಪಡೆಯಾದರೂ ಬಿಜೆಪಿ ವಿಚಾರ ಮತ್ತು ಸಿದ್ಧಾಂತ ಒಪ್ಪಿ ನಡೆಯಬೇಕೆಂದರು. ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕರು. ಆದರೆ, ಕಾಂಗ್ರೆಸ್ನಿಂದ ಬಿಜೆಪಿಗೆ ಬಂದು ಶಾಸಕರಾದವರು ಇಂದಿಗೂ ಕಾಂಗ್ರೆಸ್ನವರೇ ನಮ್ಮ ನಾಯಕರು ಎಂದು ಹೇಳಿಕೊಳ್ಳುತ್ತಿದ್ದಾರೆ. ಸಂಘಟನಾತ್ಮಕ ವಿಷಯದಲ್ಲಿ ಇದನ್ನು ಒಪ್ಪಲಾಗದು. ಬಿಜೆಪಿಯೂ ಒಪ್ಪುವುದಿಲ್ಲ ಎಂದರು.
ಮನೆ ಬದಲಾಗಿರಬಹುದು. ನಾಯಕರಲ್ಲ ಎಂದು ಕಾಂಗ್ರೆಸ್ನಿಂದ ಬಿಜೆಪಿಗೆ ಬಂದು ಶಾಸಕರಾದವರು ಹೇಳಿದ್ದಾರೆ. ಆದರೆ, ಯಾರೇ ಆದರೂ ಪಕ್ಷದ ವಿಚಾರ ಮತ್ತು ಸಿದ್ಧಾಂತ ಒಪ್ಪಿ ನಡೆಯಬೇಕು. ಪಕ್ಷವನ್ನು ನಾವು ತಾಯಿಯಂತೆ ನೋಡುತ್ತೇವೆ. ಪಕ್ಷದ ನಾಯಕರೇ ನಮ್ಮ ನಾಯಕರು. ಬಿಜೆಪಿಯ ವಿವಿಧ ವಿಚಾರ ಹಾಗೂ ಹಿಂದುತ್ವವನ್ನು ಬೇರೆ ಪಕ್ಷದ ನಾಯಕರು ಒಪ್ಪುತ್ತಾರಾ ಎಂದು ಖಾರವಾಗಿಯೇ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ