ರಮೇಶ್ ಕಾಂಗ್ರೆಸ್ ಪರ ಕೆಲಸ ಮಾಡಿಲ್ಲ: ಸತೀಶ್
Team Udayavani, May 25, 2019, 6:00 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ಸೋಲುವ ನಿರೀಕ್ಷೆಯಿತ್ತು. ಚಿಕ್ಕೋಡಿಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ರಮೇಶ್ ಜಾರಕಿಹೊಳಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡದಿರುವುದು ಸೋಲಿಗೆ ಕಾರಣವಾಗಿದೆ ಎಂದು ಹೇಳಿದರು.
ರಮೇಶ್ ಈಗಾಗಲೇ ಮಾನಸಿಕವಾಗಿ ಕಾಂಗ್ರೆಸ್ನಿಂದ ದೂರ ಹೋಗಿದ್ದಾರೆ. ಅವರು ಯಾವಾಗ ಬೇಕಾದರೂ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬಿಜೆಪಿಯವರು ಹೆಚ್ಚಿನ ಸ್ಥಾನ ಗೆದ್ದಿರುವುದರಿಂದ ಮತ್ತೆ ಆಪರೇಷನ್ ಕಮಲ ಮಾಡುವ ಸಾಧ್ಯತೆಯಿದೆ. ಅವರಿಗೆ 10 ಶಾಸಕರ ರಾಜೀನಾಮೆ ಪಡೆಯುವ ಅಗತ್ಯವಿದೆ. ಅಷ್ಟೊಂದು ಶಾಸಕರು ಕಾಂಗ್ರೆಸ್ ತೊರೆಯುವುದಿಲ್ಲ. ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಹೀಗಾಗಿ ಮೈತ್ರಿ ಪಕ್ಷಕ್ಕೆ ಯಾವುದೇ ತೊಂದರೆಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ