ಒಂದೇ ವೇದಿಕೆಯಲ್ಲಿ ರಮೇಶ-ಹೆಬ್ಬಾಳಕರ
Team Udayavani, Feb 24, 2020, 3:01 AM IST
ಬೆಳಗಾವಿ: ಹಾವು-ಮುಂಗುಸಿಯಂತೆ ರಾಜಕಾರಣದಲ್ಲಿ ಕಿತ್ತಾಡುತ್ತಿದ್ದ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭಾನುವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದರು.
ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಶ್ರೀ ಶಿವಶೋಭಾ ಸಿನಿ ಫ್ಯಾಕ್ಟರಿ ನಿರ್ಮಿಸಿರುವ ಶ್ರೀ ಮಹಾಲಕ್ಷ್ಮೀ ದೇವಿ ಮಹಾತ್ಮೆ ಕುರಿತ “ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡರೂ ಒಬ್ಬರಿಗೊಬ್ಬರು ಮಾತನಾಡಲಿಲ್ಲ. ಮುಖವನ್ನೂ ನೋಡಲಿಲ್ಲ. ಹೆಸರು ಸೂಚಿಸುವಾಗ ಅವರ ಅಭಿಮಾನಿಗಳು ಸಿಳ್ಳೆ, ಚಪ್ಪಾಳೆ ಹೊಡೆದು ಹುರಿದುಂಬಿಸುತ್ತಿರುವುದು ಕಂಡು ಬಂತು.