ರಮೇಶ, ಲಕ್ಷ್ಮೀ ಸಹೋದರ ಮಾತುಕತೆ: ಹೆಚ್ಚಿದ ಕುತೂಹಲ
Team Udayavani, Oct 6, 2019, 3:00 AM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಅವರ ಇಡಿ ವಿಚಾರಣೆ ಬೆನ್ನಲ್ಲೇ, ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಸುಮಾರು 15 ನಿಮಿಷಗಳವರೆಗೆ ಚನ್ನರಾಜ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲ ವ್ಯವಹಾರದ ಸಂಬಂಧ ಚರ್ಚಿಸಲು ಬಂದಿದ್ದೆ. ಇದರಲ್ಲಿ ಬೇರೆ ವಿಶೇಷವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
ಈ ಮಧ್ಯೆ ಚನ್ನರಾಜ ಹಟ್ಟಿಹೊಳಿ ಹಾಗೂ ಅವರ ಜೊತೆಗೆ ಬಂದಿದ್ದ ಯುವರಾಜ ಕದಂ ಅವರೊಂದಿಗೆ ಮಾತುಕತೆ ನಡೆಸಿದ ನಂತರ ರಮೇಶ ಜಾರಕಿಹೊಳಿ ಹೊರಗಡೆ ಮಾಧ್ಯಮ ಪ್ರತಿನಿಧಿಗಳಿರುವುದನ್ನು ಕಂಡು ಮತ್ತೂಂದು ದಾರಿಯ ಮೂಲಕ ಅಲ್ಲಿಂದ ತೆರಳಿದರು. ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ನಂತರ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ ನಡುವಿನ ರಾಜಕೀಯ ಸಂಬಂಧ ಹಳಸಿರುವಾಗ ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ