ರಮೇಶ ಯಾವಾಗ ಯೂಟರ್ನ್ ಹೊಡಿತಾರೆ ಗೊತ್ತಿಲ್ಲ: ಸತೀಶ್
Team Udayavani, Sep 1, 2019, 3:04 AM IST
ಬೆಳಗಾವಿ: ಅನರ್ಹ ಶಾಸಕ ರಮೇಶ ಜಾರಕಿಹೊಳಿ ಯಾವಾಗ ಮತ್ತೆ ಯೂಟರ್ನ್ ಹೊಡೆಯುತ್ತಾರೆಂದು ಹೇಳ್ಳೋಕೆ ಸಾಧ್ಯವಿಲ್ಲ. ಅವರಿಗೆ ಮೊದಲಿನಿಂದಲೂ ಜನರ ಬಗ್ಗೆ ಕಾಳಜಿ ಕಡಿಮೆ ಎನ್ನುವ ಮೂಲಕ ಶಾಸಕ ಸತೀಶ ಜಾರಕಿಹೊಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿ ಬಾರಿ ರಮೇಶ ಚುನಾವಣೆ ರಾಜಕೀಯ ಮಾಡುತ್ತಾರೆ. ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗುಂಪುಗಾರಿಕೆ ಮಾಡಿದರೂ ಅಚ್ಚರಿಯಿಲ್ಲ.
ಆದರೆ, ಜನರು ಸಂಕಷ್ಟದಲ್ಲಿ ಇದ್ದಾಗ ಅವರನ್ನು ಬಿಟ್ಟು ದೆಹಲಿಯಲ್ಲಿ ಕುಳಿತಿರು ವುದು ಸರಿಯಲ್ಲ ಎಂದು ಟಾಂಗ್ ನೀಡಿದರು. ಬಾಲಚಂದ್ರ ಜಾರಕಿಹೊಳಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಸಿಕ್ಕಿದ್ದು ಸಂತೋಷದ ವಿಚಾರವೇನಲ್ಲ. ಇದು ಮೊದಲೇ ಕಾಂಗ್ರೆಸ್ನ ಭೀಮಾ ನಾಯಕಗೆ ಸಿಗಬೇಕಿತ್ತು. ಆದರೆ, ಈಗ ಬಿಜೆಪಿ ಪಕ್ಷದ ಆಧಾರದ ಮೇಲೆ ಬಾಲಚಂದ್ರ ಜಾರಕಿ ಹೊಳಿ ಆಯ್ಕೆಯಾಗಿದ್ದಾರೆ ಎಂದ ಅವರು, ಕೆಎಂಫ್ನಲ್ಲಿ ಒಳ್ಳೆಯ ಕೆಲಸ ಮಾಡಲಿ ಎಂಬು ದಷ್ಟೇ ನಮ್ಮ ಆಶಯ ಎಂದರು.
ಗೊಂದಲದಲ್ಲಿ ಬಿಜೆಪಿ ಸರ್ಕಾರ: ಬಿಜೆಪಿ ಸರ್ಕಾರ ಸಾಕಷ್ಟು ಗೊಂದಲದಲ್ಲಿದೆ. ಇದು ಎಷ್ಟು ದಿನ ನಡೆಯಲಿದೆ ಎಂಬುದನ್ನು ಕಾದು ನೋಡಬೇಕು. ಮುಂದೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನೂ ನೋಡಬೇಕು. ಸದ್ಯ ಬಿಜೆಪಿ ಸರ್ಕಾರ ತೊಂದರೆಯಲ್ಲಿದೆ. ಈ ಸರ ಕಾರ ಒಂದು ತಿಂಗಳು ಮಾತ್ರ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ.
ಮುಂದೆ ಏನಿದ್ದರೂ ಮಧ್ಯಂತರ ಚುನಾವಣೆಯೇ ಇದಕ್ಕೆ ಪರಿಹಾರ ಎಂದರು. ಶಾಸಕ ಉಮೇಶ ಕತ್ತಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕತ್ತಿ ಅವರನ್ನು ಸಾಕಷ್ಟು ಬಾರಿ ಭೇಟಿಯಾಗಿದ್ದೇನೆ. ಆಗಾಗ ಭೆಟ್ಟಿಯಾಗುತ್ತಲೇ ಇರುತ್ತೇನೆ. ಅದರಲ್ಲಿ ಹೊಸದೇನಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ