Rameshwaram Cafe: ಶಂಕಿತನ ಗುರುತು ಪತ್ತೆ?
ಬಾಂಬರ್ ಹಿಡಿಯುವ ಕೆಲಸವಷ್ಟೇ ಆಗಬೇಕಿದೆ: ಡಾ| ಪರಂ
Team Udayavani, Mar 12, 2024, 12:51 AM IST
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರನ ಪತ್ತೆಗೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದು, ಶಂಕಿತ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಆತನನ್ನು ಹಿಡಿಯುವ ಕೆಲಸವಷ್ಟೇ ಆಗಬೇಕಿದೆ ಎಂದು ತಿಳಿದು ಬಂದಿದೆ.
ರಾಮೇಶ್ವರಂ ಕೆಫೆ ಬಾಂಬರ್ ಕಾರ್ಯಾಚರಣೆ ವೇಳೆ ಆತನ ಹೆಜ್ಜೆ ಗುರುತುಗಳನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಪ್ರಮುಖ ಸಾಕ್ಷ್ಯಗಳು ಸಿಕ್ಕಿವೆ. ಕಲಬುರಗಿ ಹಾಗೂ ಯಾದಗಿರಿಯ ಸಿಸಿ ಕೆಮರಾ ದೃಶ್ಯಾವಳಿ ಪರಿಶೀಲಿಸಿದಾಗ ಆತನ ಚಲನವಲನ ಪತ್ತೆಯಾಗಿದೆ. ಎನ್ಐಎ ತಂಡ ಆತನನ್ನು ಹುಡುಕಾಡುತ್ತಿರುವುದನ್ನು ಅರಿತು ಹೊರ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಸಿಸಿಬಿ ಪೊಲೀಸರು ಎನ್ಐಎಗೆ ಸಹಕಾರ ನೀಡುತ್ತಿದ್ದು ಎರಡೂ ತನಿಖಾ ತಂಡಗಳಿಗೂ ಶಂಕಿತ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಆದರೆ ಅದು ಬಾಂಬರ್ ಎಂಬುದು ದೃಢಪಡಬೇಕಿದೆ. ಶಂಕಿತ ಪ್ರಯಾಣಿಸಿರುವ ಜಾಗದಲ್ಲಿ ಕೆಲವೊಂದು ಹೆಗ್ಗುರುತು ಬಿಟ್ಟು ಹೋಗಿದ್ದು ಅದರ ಆಧಾರದ ಮೇಲೆ ಜಾಡು ಹಿಡಿಯಲಾಗುತ್ತಿದೆ. ಆತ ಹಿಂದಿ ಭಾಷೆಯ ಜತೆಗೆ ಎಷ್ಟು ಭಾಷೆ ಬಲ್ಲವನಾಗಿದ್ದಾನೆ ಎಂಬುದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಹೈದರಾಬಾದ್ ಕರ್ನಾಟಕದ ಎಲ್ಲ ಭಾಗಗಳಲ್ಲೂ ಶೋಧ ನಡೆಸುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಈ ಕುರಿತು ಪತ್ರಕರ್ತರೊಂದಿಗೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಸಹ ಮಾಹಿತಿ ಹಂಚಿಕೊಂಡಿದ್ದು, ಬಾಂಬರ್ ಬಗ್ಗೆ ಸುಳಿವು ಸಿಕ್ಕಿದೆ. ಒಂದು ರೀತಿಯಲ್ಲಿ ಬಾಂಬರ್ ಯಾರು ಎಂಬ ಗುರುತು ಸಿಕ್ಕಿದೆ. ಅದನ್ನು ದೃಢಪಡಿಸಿ ಆತನನ್ನು ಹಿಡಿಯುವ ಕೆಲಸ ಆಗಬೇಕಾಗಿದೆ. ಸಿಸಿಬಿ ಪೊಲೀಸರು ಹಾಗೂ ಎನ್ಐಎ ಅಧಿಕಾರಿಗಳು ಆತನ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ