ರಾಮನಾಥ ಕೋವಿಂದ್ ಗೆಲುವು: ರಾಜ್ಯ ಬಿಜೆಪಿ ಸಂಭ್ರಮಾಚರಣೆ
Team Udayavani, Jul 21, 2017, 9:40 AM IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮ್ನಾಥ ಕೋವಿಂದ್ ಅವರು ಭಾರಿ ಅಂತರದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಬಳಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಸಂಭ್ರಮಾಚರಣೆ ಮಾಡಿದರು.
ಈ ಮಧ್ಯೆ ನೂತನವಾಗಿ ರಾಷ್ಟ್ರಪತಿಯಾಗಲಿರುವ ರಾಮ್ನಾಥ ಕೋವಿಂದ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರಿ ಪಕ್ಷದ ಮುಖಂಡರು ಕೋವಿಂದ್ ಅವರಿಗೆ ಅಭಿನಂದನೆ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಪಕ್ಷದ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.ವೀರಯ್ಯ, ಶಾಸಕ ಬಿ.ಎನ್.
ವಿಜಯಕುಮಾರ್ ನೇತೃತ್ವದಲ್ಲಿ ನಡೆದ ಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿದರು.
ಅಭಿನಂದನೆ: ರಾಮ್ನಾಥ ಕೋವಿಂದ್ ಅವರು ಸಾಮಾನ್ಯ ಕುಟುಂಬಕ್ಕೆ ಸೇರಿದ್ದರೂ ದೇಶದ ಅತ್ಯುನ್ನತ ಸ್ಥಾನ ಅಲಂಕರಿಸುತ್ತಿರುವುದು ದೇಶದ ಸಮಸ್ತ ಜನ ಹೆಮ್ಮೆ ಪಡುವ ಸಂಗತಿ. ಸುಶಿಕ್ಷಿತರಾಗಿರುವ ಅವರು ಸಂವಿಧಾನಕ್ಕೆ ಪೂರಕವಾಗಿ ಕೆಲಸ ಮಾಡುವ ವಿಶ್ವಾಸ ಎಲ್ಲರಿಗೂ ಇದೆ ಎಂದು ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ