ರಾಮುಲು-ಸುಧಾಕರ್ ಸಂಧಾನ ಪ್ರಹಸನ: ಎಲ್ಲವೂ ಸರಿಯಿದೆ ಎನ್ನುತ್ತಲೇ ಪರಸ್ಪರ ಕಾಲೆಳೆದ ಸಚಿವರು!
Team Udayavani, Oct 13, 2020, 12:45 PM IST
ಬೆಂಗಳೂರು: ಖಾತೆ ಬದಲಾವಣೆ ಬೆಳವಣಿಗೆಯಿಂದ ಬೇಸರಗೊಂಡಿದ್ದ ಸಚಿವ ಬಿ ಶ್ರೀರಾಮುಲು ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದರು. ಕೆ ಸುಧಾಕರ್ ಕೂಡಾ ಸಿಎಂ ನಿವಾಸಕ್ಕೆ ಆಗಮಿಸಿದ್ದು, ಉಭಯ ಸಚಿವರಿಗೂ ಸಿಎಂ ಕಿವಿಮಾತು ಹೇಳಿದ್ದಾರೆ ಎಂದು ವರದಿಯಾಗಿದೆ.
ಸಿಎಂ ಸಂಧಾನದ ನಂತರ ಬೇಸರ, ಅಸಮಾಧಾನವಿಲ್ಲವೆಂದು ತೋರ್ಪಡಿಸಲು ರಾಮುಲು ಮತ್ತು ಸುಧಾಕರ್ ಇಬ್ಬರೂ ಮಾಧ್ಯಮದವರೆದುರು ಹೇಳಿಕೆ ನೀಡಿದರು. ಇಬ್ಬರು ಸಚಿವರು ಕೂಡಾ ತಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿಕೊಂಡರೂ, ಟಾಂಗ್ ನೀಡುವುದನ್ನು ಮರೆಯಲಿಲ್ಲ.
ಈ ಹಿಂದೆ ನಾನು ಕೋವಿಡ್ ಉಸ್ತುವಾರಿಯಾಗಿದ್ದಾಗ ಬೆಂಗಳೂರಿನಲ್ಲಿ ಸಾವಿರ ಪ್ರಕರಣಗಳಿತ್ತು. ಸುಧಾಕರ್ ಉಸ್ತುವಾರಿ ಪಡೆದ ನಂತರ ಕೋವಿಡ್ ಕೇಸ್ ಐದು ಸಾವಿರಕ್ಕೇರಿತ್ತು. ಹಾಗೆಂದ ಮಾತ್ರಕ್ಕೆ ಸುಧಾಕರ್ ಕೋವಿಡ್ ನಿಯಂತ್ರಿಸಲು ವಿಫಲನಾಗಿದ್ದಾರೆ ಎಂದರ್ಥವಲ್ಲ ಎಂದು ಪರೋಕ್ಷವಾಗಿ ಸುಧಾಕರ್ ಗೆ ಕುಟುಕಿದರು.
ಇದನ್ನೂ ಓದಿ:ಸಂತೋಷದಿಂದ, ಸಂಪೂರ್ಣ ಒಪ್ಪಿಗೆಯಿಂದ ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದೇನೆ: ರಾಮುಲು
ಈ ಮಾತುಗಳನ್ನು ಕೇಳಿಸಿಕೊಂಡ ಸಚಿವ ಸುಧಾಕರ್ ನಂತರ ಮಾತನಾಡಿ, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಳಹಂತದಲ್ಲಿ ಸಮನ್ವಯದ ಕೊರತೆಯಿತ್ತು. ಹಾಗಾಗಿ ತಾಂತ್ರಿಕತೆ ಮತ್ತು ಸಮನ್ವಯತೆ ಕಾಪಾಡಿಕೊಳ್ಳಲು ಖಾತೆ ಬದಲಾವಣೆ ಮಾಡಲಾಗಿದೆ. ಇಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬ ಪ್ರಶ್ನೆಯೇ ಇಲ್ಲ. ರಾಮುಲು ಅಣ್ಣ ಅವರಿಗೆ ದೊಡ್ಡ ಇಲಾಖೆಯೆ ಸಿಕ್ಕಿದೆ. ಅವರು ಡಿ ಪ್ರಮೋಟ್ ಆಗಿಲ್ಲ, ಪ್ರಮೋಶನ್ ಆಗಿದೆ ಎಂದು ಸುಧಾಕರ್ ಅವರು ರಾಮುಲುಗೆ ಪರೋಕ್ಷ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!