ರಾತ್ರೋ ರಾತ್ರಿ ಮಂಡ್ಯದ ಮನೆ ಖಾಲಿ ಮಾಡಿದ ರಮ್ಯಾ!
Team Udayavani, Dec 3, 2018, 10:02 AM IST
ಮಂಡ್ಯ:ಮಾಜಿ ಕಾಂಗ್ರೆಸ್ ಸಂಸದೆ,ನಟಿ ರಮ್ಯಾ ಅವರು ಮಂಡ್ಯದ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿರುವ ಬಾಡಿಗೆ ಮನೆಯನ್ನು ಖಾಲಿ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಭಾನುವಾರ ತಡರಾತ್ರಿ ನಿವಾಸದಿಂದ 2 ಲಾರಿಗಳಲ್ಲಿ ವಸ್ತುಗಳನ್ನು ಸಾಗಾಟ ಮಾಡಲಾಗಿರುವುದು ಮಾಧ್ಯಮಗಳ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಹೀಗಾಗಿ ರಮ್ಯಾ ಮನೆ ಖಾಲಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ನಿಮ್ಮ ಜೊತೆಯಿದ್ದು ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದವರು ಯಾಕೆ ರಾತ್ರೋ ರಾತ್ರಿ ಮನೆ ಖಾಲಿ ಮಾಡಿದಿರಿ.ಮನೆ ಖಾಲಿ ಮಾಡಿರುವ ಕುರಿತು ಸ್ಪಷ್ಟನೆ ನೀಡಿ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ಅವರ ಈ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.
ಅಂಬರೀಶ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳದ ರಮ್ಯಾ ವಿರುದ್ಧ ಮಂಡ್ಯದ ಅಂಬರೀಶ್ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ