ರಮ್ಯಾ, ಎಂ.ಬಿ.ಪಾಟೀಲ್ ಇಬ್ಬರೂ ನಮಗೆ ಬೇಕಾದವರು: ಡಿ.ಕೆ. ಶಿವಕುಮಾರ್

ಎಲ್ಲಿ, ಏನು ಅಪಾರ್ಥವಾಗಿದೆಯೋ ತಿಳಿದಿಲ್ಲ, ಬಹಿರಂಗವಾಗಿ ಚರ್ಚೆ ಇಲ್ಲ

Team Udayavani, May 12, 2022, 3:20 PM IST

1-fggdfg

ಬೆಂಗಳೂರು : ಎಂ.ಬಿ. ಪಾಟೀಲ್ ಅವರು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರು. ರಮ್ಯಾ ಅವರು ಪಕ್ಷದ ಮಾಜಿ ಸಂಸದೆ. ಇಬ್ಬರೂ ನಮಗೆ ಬೇಕಾದವರು. ಎಲ್ಲಿ, ಏನು ಅಪಾರ್ಥವಾಗಿದೆಯೋ ತಿಳಿದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿಕೆಯಿಂದಾದ ಹಾನಿ ನಿಯಂತ್ರಣಕ್ಕೆ    ಮುಂದಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರು , ಮಾಜಿ ಸಂಸದೆ ರಮ್ಯಾ ಅವರ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು, ‘ನನಗೆ ಯಾವುದೇ ವಿಚಾರ ತಿಳಿದಿಲ್ಲ. ಮಾಧ್ಯಮಗಳು ನಮ್ಮ ಮನೆಗೆ ಬಂದು ಅಶ್ವತ್ಥ್ ನಾರಾಯಣ್ ಅವರು ಎಂ.ಬಿ ಪಾಟೀಲ್ ಅವರ ಮನೆಗೆ ಹೋಗಿದ್ದಾರೆ ಎಂದು ಪ್ರಶ್ನೆ ಕೇಳಿದರು. ನಾನು ರಕ್ಷಣೆಗೆ ಹೋಗಿರಬಹುದು ಎಂದು ಹೇಳಿದ್ದೇನೆ. ಇದರ ಹೊರತಾಗಿ ಬೇರೇನೂ ವಿಚಾರವಿಲ್ಲ. ಅನಗತ್ಯ ರಂಪಾಟ ಬೇಡ. ಯಾರಿಗೆ ಯಾವ ವಿಚಾರವಾಗಿ ನೋವಾಗಿದೆಯೋ ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಬಹಿರಂಗವಾಗಿ ಚರ್ಚೆ ಮಾಡಲು ಸಿದ್ಧವಿಲ್ಲ ಎಂದರು.

ಕುಮಾರಸ್ವಾಮಿ ಅವರ ಆರೋಪದಲ್ಲಿ ಸತ್ಯಾಂಶವಿದೆ

ಸದ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಅಕ್ರಮವನ್ನು ಮುಚ್ಚಿಹಾಕುವ ಪ್ರಯತ್ನದ ಬಗ್ಗೆ ಚರ್ಚೆ ಮಾಡೋಣ. ಪಿಎಸ್ಐ ಹಗರಣ, ಎಫ್ ಡಿಎ, ಕಿರಿಯ ಇಂಜಿನಿಯರ್ ನೇಮಕ ವಿಚಾರದಲ್ಲಿ ಏನಾಗಿದೆ ಎಂದು ತನಿಖೆ ಆಗಲಿ. ಈಗಾಗಲೇ ಬಂಧಿತರು ಜೆಇ ಹುದ್ದೆ ಅಕ್ರಮದಲ್ಲೂ ಭಾಗಿಯಾಗಿರುವುದಾಗಿ ಹೇಳಿಕೆ ನೀಡಿದ್ದರೂ ಅದನ್ನು ಪಕ್ಕಕ್ಕಿಟ್ಟು ಪಿಎಸ್ ಐ ವಿಚಾರವನ್ನು ಮಾತ್ರ ತನಿಖೆ ಮಾಡುತ್ತಿದ್ದಾರೆ. ಇದು ದೊಡ್ಡ ಡೀಲ್, 300 ಕೋಟಿ ರೂ . ಅವ್ಯವಹಾರ ನಡೆದಿದೆ ಎಂಬ ಕುಮಾರಸ್ವಾಮಿ ಅವರ ಆರೋಪದಲ್ಲಿ ಸತ್ಯಾಂಶವಿದೆ. ಈ ವಿಚಾರದಲ್ಲಿ ಚಿಂತನೆ ಮಾಡಬೇಕು ಎಂದು ಒತ್ತಾಯ ಮಾಡುತ್ತೇವೆ’ ಎಂದರು.

ಪಿಎಸ್ಐ ಹಾಗೂ ಇತರೆ ನೇಮಕಾತಿ ಅಕ್ರಮ ವಿಚಾರದಲ್ಲಿ ಸರ್ಕಾರ ಮೌನವಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಮೌನ ವಹಿಸಿಲ್ಲ. ಜನರ ಗಮನವನ್ನು ಈ ವಿಚಾರದಿಂದ ಬೇರೆಡೆ ಸೆಳೆಯಲು ಈ ಎಲ್ಲ ವಿಚಾರಗಳು ಬರುತ್ತಿವೆ. 40 ಪರ್ಸೆಂಟ್ ಕಮಿಷನ್, ನೇಮಕಾತಿ ಅಕ್ರಮ ನಮ್ಮ ಪ್ರಮುಖ ಅಜೆಂಡಾ. ಪಿಎಸ್ಐ ಅಕ್ರಮದಲ್ಲಿ ಕೇವಲ ಅಭ್ಯರ್ಥಿಗಳನ್ನು ಬಂಧಿಸಿದರೆ ಸಾಲದು, ನೀವು ಅಕ್ರಮದ ಅಂಗಡಿ ತೆರೆದಿದ್ದಕ್ಕೆ ಅವರು ಬಂದಿದ್ದಾರೆ. ಈ ಅಕ್ರಮದ ಅಂಗಡಿ ತೆರೆಯಲು ಬೆಂಬಲ ನೀಡಿದ ಪ್ರಮುಖರ ಹೆಸರು ಬಹಿರಂಗವಾಗಲಿ. ಯಾರು ಎಷ್ಟು ಜನರಿಗೆ ಬೆಂಬಲ ನೀಡಿದ್ದಾರೆ. ಯಾರ ಕಚೇರಿಯಿಂದ ಯಾರಿಗೆ ಎಷ್ಟು ಕರೆ ಹೋಗಿದೆ ಎಂಬ ಮಾಹಿತಿ ನಮ್ಮ ಬಳಿ ಇವೆ. ಸರ್ಕಾರ ತನಿಖೆಯನ್ನು ಯಾವ ರೀತಿ ಮಾಡುತ್ತದೆಯೋ ಮಾಡಲಿ. ಸಮಯ ಬಂದಾಗ ನಾವು ಮಾತನಾಡುತ್ತೇವೆ’ ಎಂದರು.

ದಿನನಿತ್ಯ ಅಶ್ವತ್ಥ್ ನಾರಾಯಣ್ ಅವರು ನಿಮ್ಮ ಬಗ್ಗೆ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ‘ಮಾತನಾಡಲಿ, ಅವರು ನನ್ನ ಬಗ್ಗೆ ಮಾತನಾಡಿದರೆ ಅವರಿಗೆ ಅವರ ಪಕ್ಷದಲ್ಲಿ ಶಕ್ತಿ ಬರುತ್ತದೆ’ ಎಂದು ತಿರುಗೇಟು ಕೊಟ್ಟರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.