ರೇಪ್ ಆರೋಪಿಗೆ ಬೇಲ್; ಭವ್ಯ ಮೆರವಣಿಗೆಯಲ್ಲಿ ಸ್ವಾಗತ!!
Team Udayavani, Sep 15, 2017, 11:24 AM IST
ಧಾರವಾಡ : ರಾಜಕಾರಣಿಗಳು, ಸಿನಿಮಾ ನಟರ ರೋಡ್ ಶೋಗಳನ್ನು ನೋಡಿದ್ದೀರಿ. ಆದರೆ ಧಾರವಾಡದಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದ ಆರೋಪಿಯೊಬ್ಬ ಜಾಮೀನಿನ ಮೇಲೆ ಬಿಡುಗಡೆಯಾದಾಗ ಭವ್ಯ ರೋಡ್ ಶೋ ಮಾಡಿ ಸ್ವಾಗತ ಮಾಡಿರುವ ನಾಚಿಕೆಗೇಡಿನ ಘಟನೆ ಗುರುವಾರ ನಡೆದಿದೆ.
2 ತಿಂಗಳ ಹಿಂದೆ ಹುಬ್ಬಳ್ಳಿಯ ಲಾಡ್ಜ್ ವೊಂದರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೈಲು ಪಾಲಾಗಿದ್ದ ಮುಕ್ತುಂ ಸೊಗಲದ ಎಂಬಾತನಿಗೆ ಧಾರವಾಡ ನ್ಯಾಯಾಲಯ ಜಾಮೀನು ನೀಡಿತ್ತು.
ಜಾಮೀನು ಸಿಕ್ಕ ಕೂಡಲೇ ಹಾರ, ತುರಾಯಿಗಳೊಂದಿಗೆ ನ್ಯಾಯಾಲಯದ ಬಳಿ ಜಮಾಯಿಸಿದ ನೂರಾರು ಬೆಂಬಲಿಗರು ಯುದ್ಧ ಗೆದ್ದ ಮಾದರಿಯಲ್ಲಿ ಕೇಕೆ ಹಾಕುತ್ತಾ ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ಮತ್ತು ಕಾರುಗಳ ಮೆರವಣಿಗೆ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಸುಮಾರು 500 ಬೈಕ್ಗಳು ಮತ್ತು 20 ಕ್ಕೂ ಹೆಚ್ಚು ಕಾರುಗಳು, ಆಟೋಗಳಲ್ಲಿ ಬಂದ ಬೆಂಬಲಿಗರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ಮೆರವಣಿಗೆ ವೇಳೆ ಸಾರ್ವಜನಿಕರಿಗೆ ತೀವ್ರ ಕಿರಿಕಿರಿಯಾಗಿದ್ದು ಆರೋಪಿಯೊಬ್ಬನಿಗೆ ಈ ಪರಿಯ ಮೆರವಣಿಗೆ ಬೇಕಿತ್ತೆ ಎಂದು ಆಕ್ರೋಶ ಹೊರ ಹಾಕಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮುಕ್ತುಂ ಈ ಹಿಂದೆ ಜೆಡಿಎಸ್ ಮುಖಂಡನಾಗಿದ್ದು ಆರೋಪ ಬಂದ ತಕ್ಷಣ ಆತನನ್ನು ಉಚ್ಛಾಟನೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ