ಅಪ್ರಾಪ್ತ ವಯಸ್ಕ ಪತ್ನಿ ಜತೆ ಸೆಕ್ಸ್‌ ನಡೆಸಿದರೆ ಅತ್ಯಾಚಾರ


Team Udayavani, Oct 12, 2017, 6:35 AM IST

sc-1.jpg

ಹೊಸದಿಲ್ಲಿ: ಅಪ್ರಾಪ್ತ ವಯಸ್ಸಿನ ಪತ್ನಿ ಜತೆಗೆ ಲೈಂಗಿಕ ಸಂಪರ್ಕ ನಡೆಸಿದರೆ ಅದನ್ನು ಅತ್ಯಾಚಾರವೆಂದೇ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್‌ ತೀರ್ಪಿತ್ತಿದೆ. ಈ ಮೂಲಕ ಸಮ್ಮತಿ ಸೆಕ್ಸ್‌ಗೆ ಕಾನೂನು ಬದ್ಧ ವಯಸ್ಸು 
18 ಎಂದು ನ್ಯಾಯಾಲಯ ನಿಗದಿಪಡಿಸಿದಂತಾಗಿದೆ.  ಮದುವೆಯಾದ ಒಂದು ವರ್ಷದೊಳಗೆ ಅಪ್ರಾಪ್ತ ವಯಸ್ಸಿನ ಪತ್ನಿಯ ಜತೆ ಬಲವಂತಾಗಿ ಲೈಂಗಿಕ ಸಂಪರ್ಕ ನಡೆಸಲಾಗಿದೆ ಎಂದು ಆಕೆ ದೂರು ನೀಡಿದರೆ ಪೊಲೀಸರು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ನ್ಯಾ| ಎಂ.ಬಿ.ಲೋಕುರ್‌ ಮತ್ತು ನ್ಯಾ| ದೀಪಕ್‌ ಗುಪ್ತಾ ನೇತೃತ್ವದ ನ್ಯಾಯಪೀಠ ಹೇಳಿದೆ. ವಿವಾಹವಾದ ಬಳಿಕ ಪತ್ನಿಯ ಜತೆಗೆ ಪತಿ ಬಲವಂತವಾಗಿ ನಡೆಸುವ ದೇಹ ಸಂಪರ್ಕವನ್ನು ವೈವಾಹಿಕ ಅತ್ಯಾಚಾರ ಎಂದು ಪರಿಗಣಿಸಬೇಕು ಎಂದು ಒತ್ತಾಯ ಕೇಳಿ ಬರುತ್ತಿರುವಂತೆಯೇ ಸುಪ್ರೀಂಕೋರ್ಟಿನ ಈ ತೀರ್ಪು ಮಹತ್ವದ್ದಾಗಿದೆ.

ಸದ್ಯ ಇರುವ ಕಾನೂನಿನಲ್ಲಿ ವೈರುಧ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ  ಭಾರತೀಯ ದಂಡಸಂಹಿತೆ ಪರಿಚ್ಛೇದ 375ರ ಅಡಿಯಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ಪತ್ನಿಯ ಜತೆ ಸೆಕ್ಸ್‌ ಅನ್ನು ಅತ್ಯಾಚಾರ ಎಂದು ಪರಿಗಣಿಸುವಂತಿಲ್ಲ ಎಂದು ಉಲ್ಲೇಖೀಸಲಾಗಿದೆ. ಹೀಗಾಗಿ 15 ರಿಂದ 18 ವರ್ಷದವರೆಗಿನ ಬಾಲಕಿಯರನ್ನು ವಿವಾಹ ವಾಗುವುದು ಕಾನೂನ ಮಾನ್ಯತೆಯನ್ನು ಹೊಂದಿದಂದಾ ತಾಗುತ್ತದೆ. ಆದರೆ ಎಲ್ಲ ಕಾನೂನುಗಳಲ್ಲೂ ವಿವಾಹದ ಕನಿಷ್ಠ ವಯಸ್ಸು 18 ಆಗಿದೆ. ಈ ಗೊಂದಲ ಕಾನೂನು ತೊಡಕಿಗೆ ಕಾರಣವಾಗಿದೆ. ವೈರುಧ್ಯವನ್ನು ನಿವಾರಿಸುವ ದೃಷ್ಟಿಯಿಂದ ಸುಪ್ರೀಂಕೋರ್ಟ್‌ನ ಈ ಆದೇಶ ಮಹತ್ವದ್ದಾಗಿದೆ.

ಸಾಮಾಜಿಕ ನ್ಯಾಯ ಕಾನೂನುಗಳಿಗೆ ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗುತ್ತಿಲ್ಲ. ಹಲವು ವರ್ಷಗಳಿಂದಲೂ ಈ ವೈರುಧ್ಯ ಚಾಲ್ತಿಯಲ್ಲಿದೆ. ಅಲ್ಲದೆ ಇದು ಸಂವಿಧಾನದ 14, 15 ಮತ್ತು 21ನೇ ಪರಿಚ್ಛೇದಕ್ಕೂ ವಿರುದ್ಧವಾಗಿದೆ. ಬಾಲ್ಯ ವಿವಾಹವನ್ನು ತಡೆಯಲು ಕೇಂದ್ರ ಸರಕಾರ ಕಠಿನ ಕ್ರಮಕೈಗೊಳ್ಳಬೇಕಿದೆ ಎಂದು ನ್ಯಾ| ಎಂ.ಬಿ. ಲೋಕೂರ್‌ ಮತ್ತು ನ್ಯಾ| ದೀಪಕ್‌ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಸುಮಾರು 2.3 ಕೋಟಿ ಬಾಲವಧುಗಳು ಇದ್ದಾರೆ. ಅವರ ಹಿತರಕ್ಷಣೆಯ ಹಿನ್ನೆಲೆ ಯಲ್ಲಿ ಸುಪ್ರೀಂ ಕೋರ್ಟ್‌ ಈ ತೀರ್ಪು ಮಹತ್ವದ್ದಾಗಿದೆ.

ಕರ್ನಾಟಕಕ್ಕೆ ಶ್ಲಾಘನೆ
ಮದುವೆಯಾಗುವ ವರನ ವಯಸ್ಸು 21ರೊಳಗೆ ಹಾಗೂ ವಧುವಿನ ವಯಸ್ಸು 18ರೊಳಗಿದ್ದರೆ ಅಂಥ ಮದುವೆ ಸಿಂಧುವಲ್ಲ ಎಂದು ಕರ್ನಾಟಕ ರಾಜ್ಯ ಸರಕಾರ ತಂದಿರುವ ಕಾನೂನಿನ ಬಗ್ಗೆ ಸುಪ್ರೀಂ ಮೆಚ್ಚುಗೆ ವ್ಯಕ್ತಪಡಿಸಿ, ಇತರ ರಾಜ್ಯಗಳೂ ಇಂಥ ಕಾನೂನು ಜಾರಿಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಈ ಬಗ್ಗೆ ಪ್ರತ್ಯೇಕವಾಗಿ 57 ಪುಟಗಳ ತೀರ್ಪಿನಲ್ಲಿ ನ್ಯಾ| ಗುಪ್ತಾ ಮದುವೆಯೇ ಅಸಿಂಧು ಎಂದಾದ ಮೇಲೆ ಪತ್ನಿ ಅಥವಾ ಪತಿ ಎಂಬ ಸಂಬಂಧದ ಮಾತೇ ಇಲ್ಲ.

7 ವರ್ಷ ಜೈಲು ಶಿಕ್ಷೆ 
ಈ ಆದೇಶದಿಂದಾಗಿ 15ಕ್ಕಿಂತಲೂ ಹೆಚ್ಚಿನ ವಯಸ್ಸಿನ ಅಪ್ರಾಪ್ತರನ್ನು ವಿವಾಹವಾದರೆ ಬಾಲ್ಯ ವಿವಾಹ ಕಾಯ್ದೆ ಅಡಿಯಲ್ಲಿ ಶಿಕ್ಷೆಯ ಜತೆಗೆ ಅಪ್ರಾಪೆ¤ಯನ್ನು ಅತ್ಯಾಚಾರ ನಡೆಸಿದ್ದಕ್ಕೆ ಭಾರತೀಯ ದಂಡ ಸಂಹಿತೆ ಅಡಿಯಲ್ಲೂ ಶಿಕ್ಷೆ ವಿಧಿಸಲಾಗುತ್ತದೆ. ಹೀಗಾಗಿ ಕನಿಷ್ಠ ಏಳು ವರ್ಷಗಳವರೆಗೆ ಶಿಕ್ಷೆ ವಿಧಿಸಬಹುದಾಗಿದೆ. ಈ ಬಗ್ಗೆ ಅಪ್ರಾಪೆ¤ ಸ್ವತಃ ದೂರು ನೀಡಬಹುದು ಅಥವಾ ಅಪ್ರಾಪೆ¤ಯ ಪರವಾಗಿ ಇತರರು ದೂರು ನೀಡಬಹುದಾಗಿದೆ.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.