ಪತ್ರಕರ್ತನ ಕೊಲೆಗೆ ಸುಪಾರಿ :ರವಿ ಬೆಳಗೆರೆ ಅರೆಸ್ಟ್!
Team Udayavani, Dec 8, 2017, 2:29 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ವೇಳೆ ಎಸ್ಐಟಿ ಅಧಿಕಾರಿಗಳು ಇನ್ನೊಂದು ಸ್ಫೋಟಕ ವಿಚಾರ ಬಯಲಿಗೆಳೆದಿದ್ದು, ಪತ್ರಕರ್ತನೊಬ್ಬನ ಹತ್ಯೆ ಗೆ ಸುಪಾರಿ ನೀಡಿದ ಆರೋಪದಲ್ಲಿ ಪತ್ರಕರ್ತ ರವಿ ಬೆಳಗೆರೆಯವರನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ.
ವರದಿಯಾದಂತೆ 2 ನೇ ಪತ್ನಿ ಯಶೋಮತಿ ಅವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪದಲ್ಲಿ ಸಹುದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಭೀಮಾ ತೀರದ ಹಂತಕನಿಗೆ ಸುಪಾರಿ ನೀಡಿರುವ ವಿಚಾರ ಎಸ್ಐಟಿ ಅಧಿಕಾರಿಗಳಿಗೆ ತಿಳಿದು ಬಂದಿದೆ.
ಭೀಮಾ ತೀರದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಎಂಬಾತನಿಗೆ 30 ಲಕ್ಷ ರೂಪಾಯಿ ಸುಪಾರಿ ನೀಡಿರುವುದು ತನಿಖೆ ವೇಳೆ ಬಯಲಾಗಿದೆ.
ಗೌರಿ ಹತ್ಯೆ ಪ್ರಕರಣದ ತನಿಖೆಯ ವೇಳೆ ಸಂಶಯದಲ್ಲಿ ಶಶಿ ಮುಂಡೇವಾಡಗಿ ಯನ್ನು ವಶಕ್ಕೆ ಪಡೆಯಾಗಿತ್ತು.
ತೀವ್ರ ವಿಚಾರಣೆ ವೇಳೆ ರವಿ ಬೆಳೆಗೆರೆ ನೀಡಿದ್ದ ಸುಪಾರಿ ವಿಚಾರವನ್ನು ಬಾಯ್ಬಿಟ್ಟಿದ್ದಾನೆ.
ಅಗಸ್ಟ್ 28 ರಂದು ಸುನೀಲ್ರನ್ನು ಉತ್ತರ ಹಳ್ಳಿಯಲ್ಲಿರುವ ಅಪಾರ್ಟ್ ಮೆಂಟ್ನಲ್ಲಿ ಶೂಟ್ ಮಾಡಲು ನಿರ್ಧರಿಸಿದ್ದೆ. ಆದರೆ ಸಿಸಿಟಿವಿ ಕಣ್ಗಾವಲು ನೋಡಿ ವಾಪಾಸಾಗಿದ್ದೆ ಎನ್ನುವ ವಿಚಾರವನ್ನು ಬಾಯ್ ಬಿಟ್ಟಿರುವುದಾಗಿ ವರದಿಯಾಗಿದೆ.
ಬೆಳಗೆರೆ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇಂದೇ ಕೋರ್ಟ್ಗೆ ಹಾಜರು ಪಡಿಸಲಾಗುತ್ತಿದೆ.
ಎದೆನೋವು ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ,ವಿಚಾರಣೆ ವೇಳೆ ನಡುಗುತ್ತಿದ್ದಾರೆ ಎಂದು ವರದಿಯಾಗಿದೆ.
ಹಕ್ಕುಚ್ಯುತಿ ಆರೋಪದ ಮೇಲೆ ಪತ್ರಕರ್ತ ರವಿ ಬೆಳಗೆರೆಗೆ ಈಗಾಗಲೆ 1 ವರ್ಷ ಜೈಲು ಶಿಕ್ಷೆಯಾಗಿದೆ.
ಪೊಲೀಸರು ಬೆಳಗೆರೆ ಅವರ ನಿವಾಸ ಮತ್ತು ಹಾಯ್ ಬೆಂಗಳೂರು ಕಚೇರಿಯ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅವರ 2 ಕಾರುಗಳ ಪರಿಶೀಲನೆ ವೇಳೆ ರಿವಾಲ್ವರ್ ಮತ್ತು ಡಬಲ್ ಬ್ಯಾರಲ್ ಗನ್ ಪತ್ತೆಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.
ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲೂ ಬೆಳಗೆರೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು