ನಾನ್ ಮಲಗೋದೇ ಬೆಳಗಿನ ಜಾವಕ್ಕೆ..;ಜೈಲಿನಲ್ಲಿ ಬೆಳಗೆರೆ
Team Udayavani, Dec 12, 2017, 9:41 AM IST
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ
ಬಂಧನಕ್ಕೊಳಗಾಗಿರುವ ರವಿ ಬೆಳಗೆರೆಗೆ ಜೈಲಿನ ಆಸ್ಪತ್ರೆಯಲ್ಲಿ ಮೊದಲ ರಾತ್ರಿ ಕಳೆದಿದ್ದು, ನಸುಕಿನ 2 ಗಂಟೆಯ ವರೆಗೂ ಎಚ್ಚರವಾಗಿಯೇ ಇದ್ದು ಆ ಬಳಿಕ ಮಲಗಿರುವುದಾಗಿ ವರದಿಯಾಗಿದೆ.
ಜೈಲಿನ ಸಿಬಂದಿ 2 ಗಂಟೆ ಗಳೆಯಿತು ಸಾರ್..ಮಲಗಿ ಎಂದಿದ್ದಕ್ಕೆ ಬೆಳಗರೆ ‘ನಾನು ಮಲಗೋದೇ ಬೆಳಗಿನ ಜಾವಕ್ಕೆ ಕಣಯ್ಯ’ ಎಂದಿರುವುದಾಗಿ ವರದಿಯಾಗಿದೆ.
ಬೆಳಗ್ಗೆ 6.30 ಕ್ಕೆ ಎಬ್ಬಿಸಿದಾಗ ನಿತ್ಯ ಕರ್ಮಗಳನ್ನು ಮುಗಿಸಿದ ಬೆಳಗೆರೆಗೆ ಚಿತ್ರಾನ್ನ ನೀಡಲಾಗಿದೆ. ‘ಏನಯ್ಯಾ..ನನಗೆ ಚಿತ್ರಾನ್ನ ಕೋಡ್ತೀರಾ’ ಎಂದು ಪ್ರಶ್ನಿಸಿ ಕೊನೆಗೆ ವಿಧಿಯಿಲ್ಲದೆ ಚಿತ್ರಾನ್ನ ಸೇವಿಸಿರುವುದಾಗಿ ವರದಿಯಾಗಿದೆ.
ಪುತ್ರಿ ಚೇತನಾ ಬೆಳಗೆರೆ ಅವರು ಜೈಲಿಗೆ ಆಗಮಿಸಿದ್ದು, ಮನೆಯಲ್ಲಿ ಸಿದ್ದಪಡಿಸಿದ್ದ ಉಪಹಾರವನ್ನು ತಂದೆಗೆ ನೀಡಲು ತಂದಿರುವುದಾಗಿ ವರದಿಯಾಗಿದೆ.
ಕಳೆದ ನಾಲ್ಕು ದಿನಗಳಿಂದ ಸಿಸಿಬಿ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ರವಿ
ಬೆಳಗೆರೆಯನ್ನು ನ್ಯಾಯಾಲಯ ಆದೇಶದನ್ವಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಕಳುಹಿಸಲಾಗಿತ್ತು.
ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಪ್ರತ್ಯೇಕ ವಾರ್ಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ