ಬಿಜೆಪಿಯಿಂದ ಸದಸ್ಯತ್ವ ಅಭಿಯಾನ ರವಿಕುಮಾರ್‌ ರಾಜ್ಯ ಉಸ್ತುವಾರಿ


Team Udayavani, Jun 17, 2019, 3:04 AM IST

raviku

ಬೆಂಗಳೂರು: ಬಿಜೆಪಿ ರಾಷ್ಟ್ರಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸಿದ್ದು, ರಾಜ್ಯ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹಾಗೂ ಸಹ ಉಸ್ತುವಾರಿಯಾಗಿ ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರೇಮನಿ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾದ ಶಿವರಾಜ್‌ ಸಿಂಗ್‌ ಚವ್ಹಾಣ್‌ ಅವರು ಈ ಸಂಬಂಧ ನೇಮಕ ಆದೇಶ ಹೊರಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂಘಟನಾ ಪರ್ವವನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಅದಕ್ಕೆ ಪೂರಕವಾಗಿ ನೇಮಕ ಪ್ರಕ್ರಿಯೆ ನಡೆದಿದೆ.

ದೆಹಲಿಯಲ್ಲಿ ಸೋಮವಾರ ನಡೆಯಲಿರುವ ಎಲ್ಲ ರಾಜ್ಯಗಳ ಸದಸ್ಯತ್ವ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳ ಸಭೆಯಲ್ಲಿ ರವಿಕುಮಾರ್‌ ಹಾಗೂ ಜಗದೀಶ್‌ ಹಿರೇಮನಿ ಪಾಲ್ಗೊಳ್ಳಲಿದ್ದಾರೆ. ಸದಸ್ಯತ್ವ ಅಭಿಯಾನದ ರೂಪುರೇಷೆ, ಸಂಘಟನಾ ಶೈಲಿ, ಸದಸ್ಯತ್ವ ವಿಧಾನ ಹಾಗೂ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

20 ಲಕ್ಷ ಸದಸ್ಯತ್ವ ಗುರಿ: ದೇಶಾದ್ಯಂತ ಪಕ್ಷದ ಸದಸ್ಯತ್ವ ಅಭಿಯಾನಕ್ಕಾಗಿ ರಾಜ್ಯ ಉಸ್ತುವಾರಿಗಳನ್ನು ನೇಮಿಸಿದ್ದು, ಅದರಂತೆ ಕರ್ನಾಟಕದ ಅಭಿಯಾನದ ಉಸ್ತುವಾರಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಸದ್ಯ 80 ಲಕ್ಷ ಸದಸ್ಯರಿದ್ದು, ಈ ಬಾರಿ 20 ಲಕ್ಷ ಸದಸ್ಯತ್ವದ ಮೂಲಕ ಒಂದು ಕೋಟಿ ತಲುಪುವ ಗುರಿ ಹೊಂದಲಾಗಿದೆ.

ಪಕ್ಷದ ವಿಚಾರವನ್ನು ಒಪ್ಪಿ ಬರುವವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲಾಗುವುದು. ಆ ಮೂಲಕ ಬಿಜೆಪಿಯನ್ನು ಸರ್ವವ್ಯಾಪ್ತಿ, ಸರ್ವಸ್ಪರ್ಶಿ ಪಕ್ಷವನ್ನಾಗಿ ಮಾಡುವ ಸಂಕಲ್ಪ ನಮ್ಮದು ಎಂದು ರವಿಕುಮಾರ್‌ “ಉದಯವಾಣಿ’ಗೆ ತಿಳಿಸಿದರು.

ಜುಲೈ 9ರಂದು ಅಭಿಯಾನಕ್ಕೆ ಚಾಲನೆ ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಸೋಮವಾರದ ಸಭೆಯಲ್ಲಿ ಅಂತಿಮವಾಗುವ ನಿರೀಕ್ಷೆ ಇದೆ. ಮುಂದೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಂಚಾಲಕರ ನೇಮಕವಾಗಲಿದೆ.

ರಾಜ್ಯಮಟ್ಟದಲ್ಲಿ ಕಾರ್ಯಾಗಾರ ನಡೆಸುವುದರ ಜತೆಗೆ ಜಿಲ್ಲಾಮಟ್ಟದಲ್ಲೂ ಕಾರ್ಯಾಗಾರ ನಡೆಸಲಾಗುವುದು. ವರಿಷ್ಠರು ಎಲ್ಲೆಡೆ ಶೇ.20ರಷ್ಟು ಸದಸ್ಯತ್ವ ಹೆಚ್ಚಳದ ಗುರಿ ನೀಡಿದ್ದರೂ ರಾಜ್ಯದಲ್ಲಿ ಶೇ.25ರಷ್ಟು ಸದಸ್ಯತ್ವ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.