ಆರೆಸ್ಸೆಸ್‌ನವರಿಗೂ ವಿವರಣೆ ನೀಡಲು ಸಿದ್ಧ


Team Udayavani, Nov 15, 2017, 7:40 AM IST

15-5.jpg

ವಿಧಾನಪರಿಷತ್ತು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುತ್ತಾ ತಮ್ಮ ಬಗ್ಗೆ ಕೆಲವರು ಕೇವಲವಾಗಿ ಮಾತನಾಡುತ್ತಿರುವುದರಿಂದ ಭಾವೋದ್ವೇಗಕ್ಕೊಳಗಾದ ಆರೋಗ್ಯ ಸಚಿವ ಕೆ. ಆರ್‌.ರಮೇಶ್‌ಕುಮಾರ್‌, “ವಿಧೇಯಕದ ಕುರಿತು ಆರ್‌ಎಸ್‌ಎಸ್‌ ಪ್ರಮುಖರು, ಕಾರ್ಯಕರ್ತರ ಸಭೆ ಆಯೋಜಿಸಿ ತಮ್ಮ ಆಶಯ ತಪ್ಪು ಎಂದು ಹೇಳಿದರೆ ಸಾರ್ವಜನಿಕ ಜೀವನದಿಂದಲೇ ನಿವೃತ್ತಿಯಾಗುವುದಾಗಿ’ ಸವಾಲು ಹಾಕಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಮಹಾಂತೇಶ ಕವಟಗಿ ಮಠ ಅವರು ಖಾಸಗಿ ವೈದ್ಯರ ಮುಷ್ಕರ ವಿಚಾರ ಪ್ರಸ್ತಾಪಿಸಿದಾಗ ಉತ್ತರಿಸಿದ ಸಚಿವರು, “ವಿಪಕ್ಷ ನಾಯಕರು ನನ್ನನ್ನುಕೊಲೆ ಗಡುಕ, ಮಕ್ಕಳಿಲ್ಲದವನು ಎಂದೆಲ್ಲಾ ಟೀಕಿಸಿದ್ದಾರೆ. ನನಗಿಬ್ಬರು ಮಕ್ಕಳಿದ್ದಾರೆ ‘ ಎನ್ನುತ್ತಾ ಭಾವುಕರಾದರು. ಸೈದ್ಧಾಂತಿಕವಾಗಿ ನಾನು ಬಿಜೆಪಿ, ಆರ್‌ಎಸ್‌ಎಸ್‌ಗಳನ್ನು ಒಪ್ಪುವುದಿಲ್ಲ. ಆದರೆ, ಜನಹಿತ ದೃಷ್ಟಿಯಿಂದ ಮಂಡನೆ ಮಾಡಿದ ಈ ವಿಧೇಯಕ ಕುರಿತು ಆರ್‌ಎಸ್‌ಎಸ್‌ ಸಭೆ ನಡೆಸಿ ನನ್ನನ್ನು ಆಹ್ವಾನಿಸಿದರೆ ಹೋಗಿ ವಿವರಣೆ ನೀಡುವೆ. ನನ್ನ ಕಡೆಯಿಂದ ತಪ್ಪಾಗಿದೆಯೇ ಎಂಬುದನ್ನು ಅವರೇ ನಿರ್ಣಯಿಸಲಿ. ಅದನ್ನು ಬಿಟ್ಟು ನೀವು (ಬಿಜೆಪಿ) ಏಕಾಏಕಿ ನನ್ನನ್ನು ಕೊಲೆಗಡುಕ ಎಂದು ಕರೆದಿದ್ದೀರಿ. ಯಾವ ಠಾಣೆ, ಕೋರ್ಟ್‌ನಲ್ಲಿ ಕೇಸ್‌ ಇದೆ ಎಂಬುದನ್ನಾದರೂ ಹೇಳಿ. ನಿಮ್ಮ ಹೇಳಿಕೆಯಿಂದ ಮಗನೇ ನನ್ನನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಮತ್ತೆ ಭಾವೋದ್ವೇಗಕ್ಕೆ ಒಳಗಾದರು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ)ವಿಧೇಯಕ ನನ್ನ ಪ್ರತಿಷ್ಠೆ ಅಥವಾ ಹಠ ಅಲ್ಲ. ಎಲ್ಲ ಪಕ್ಷಗಳ ಸಹಮತ ಪಡೆದಿದ್ದೇನೆ. ನನ್ನ ಪಕ್ಷದವರು ಸೇರಿ ಎಲ್ಲ ಪಕ್ಷಗಳ ಕೆಲವರ ಭಿನ್ನಾಭಿಪ್ರಾಯವೂ ಇತ್ತು. ಕರಡು ರಚನೆ ವೇಳೆ ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರತಿನಿಧಿಗಳಿಗೆ ಕರಡು ಪ್ರತಿ ನೀಡಲಾಗಿತ್ತು. ನಂತರ ಅವರು ಮುಖ್ಯಮಂತ್ರಿ, ರಾಜ್ಯಪಾಲರನ್ನು ಭೇಟಿ ಮಾಡಿದರೇ ವಿನಃ ಕರಡಿಗೆ ಆಕ್ಷೇಪ ವ್ಯಕ್ತಪಡಿಸಲಿಲ್ಲ. ತಿದ್ದುಪಡಿ ಪರಿಶೀಲನೆಗೆ ಜಂಟಿ ಪರಿಶೀಲನಾ ಸಮಿತಿಯೂ ಈಗ ವರದಿ ನೀಡಿದೆ. ಇದೀಗ ತೀವ್ರ ವಿರೋಧ ತೋರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಪಕ್ಷ ನಾಯಕರಿಂದ ನಾನು ಕೊಲೆಗಡುಕ ಪಟ್ಟ ಹೊತ್ತುಕೊಳ್ಳಬೇಕಾಗಿದೆ. ಅಂತಹ ತಪ್ಪು ಏನು ಮಾಡಿದ್ದೀರಿ ಎಂದು ನನ್ನ ಮಗನೇ ಕೇಳುತ್ತಿದ್ದಾನೆ. ಇದಕ್ಕೆ ವಿಪಕ್ಷ ನಾಯಕರೇ ಪರಿಹಾರ ಸೂಚಿಸಬೇಕು ಎಂದರು. ಕೆ.ಎಸ್‌.ಈಶ್ವರಪ್ಪ ಮಧ್ಯಪ್ರವೇಶಿಸಿ, ವೈದ್ಯರು ಉಪವಾಸಕ್ಕೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಹಾಗೂ ನೀವು ಸೇರಿ ವೈದ್ಯರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.