ಅರಸು ಮಾದರಿ ಅನುಸರಿಸಲು ಡಿಕೆಶಿ “ಸಿದ್ಧ’

ಹೊಸ ಮುಖಗಳಿಗೆ ಹುಡುಕಾಟ ಸಿದ್ದರಾಮಯ್ಯರಿಂದ ಸಹಕಾರದ ಭರವಸೆ

Team Udayavani, Aug 25, 2020, 6:07 AM IST

ಅರಸು ಮಾದರಿ ಅನುಸರಿಸಲು ಡಿಕೆಶಿ “ಸಿದ್ಧ’

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಮುಂದಿನ ವಿಧಾನಸಭೆ ಚುನಾವಣೆಗೆ ಹೊಸ ಮುಖಗಳ ಹುಡುಕಾಟ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು “ದೇವರಾಜ ಅರಸು ಮಾದರಿ’ಯನ್ನು ಪಾಲಿಸಲು ಸಿದ್ಧರಾಗಿದ್ದಾರೆ. ಈ ಪ್ರಯೋಗಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಯಾವುದೇ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ಎದುರಾ ದರೂ ಅಭ್ಯರ್ಥಿಗಳು ಸಿದ್ಧರಾಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ರಾಜ್ಯದಲ್ಲಿ 65ರಿಂದ 70 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ನೀಡಲು ಮುಂದಾಗಿದ್ದಾರೆ. ಈ ಕುರಿತು ಜಿಲ್ಲಾಧ್ಯಕ್ಷರಿಗೆ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಖಾಲಿ ಕ್ಷೇತ್ರಗಳಿಗೆ ಆದ್ಯತೆ
ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರಸ್ತುತ 64 ಕಾಂಗ್ರೆಸ್‌ ಶಾಸಕರಿದ್ದಾರೆ. ಉಳಿದೆಡೆ ಮಾಜಿ ಶಾಸಕರು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎನ್ನುವುದರ ಮಾಹಿತಿ ಪಡೆಯಲು ಡಿಕೆಶಿ ನಿರ್ಧರಿಸಿದ್ದಾರೆ. ಸೋತವರು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದ್ದಾರೆ. ಜತೆಗೆ ಕಳೆದ ಚುನಾವಣೆಯಲ್ಲಿ 20 ಸಾವಿರಕ್ಕಿಂತ ಅಧಿಕ ಮತಗಳಿಂದ ಸೋತವರು ಹಾಗೂ ಸತತವಾಗಿ ಮೂರು ಚುನಾವಣೆಗಳಲ್ಲಿ ಪರಾಭವಗೊಂಡವರಿಗೂ ಟಿಕೆಟ್‌ ನೀಡದಿರಲು ಆಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕಾಂಗ್ರೆಸ್‌ ಇಬ್ಭಾಗವಾದ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ ಬಹುತೇಕ ಹಿರಿಯ ನಾಯಕರು ವೀರೇಂದ್ರ ಪಾಟೀಲ್‌ ನೇತೃತ್ವದ ಸಂಸ್ಥಾ ಕಾಂಗ್ರೆಸ್‌ ಜತೆಗೆ ಗುರುತಿಸಿಕೊಂಡಿದ್ದರು. ಆಗ ರಾಜ್ಯದಲ್ಲಿ ಇಂದಿರಾ ಕಾಂಗ್ರೆಸ್‌ನ ನೇತೃತ್ವ ವಹಿಸಿಕೊಂಡಿದ್ದ ಡಿ. ದೇವರಾಜ್‌ ಅರಸು ಅವರು ಚುನಾವಣೆಯಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದ್ದರು. ಅದರಲ್ಲಿ ಯಶಸ್ವಿಯಾದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಹೊಸಬರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ಮಾಧ್ಯಮ ಜತೆಯೂ ಕೆಲವರು ಸೇರಿಕೊಂಡಿದ್ದಾರೆ: ರಮ್ಯಾ
ಬೆಂಗಳೂರು: ಕಾಂಗ್ರೆಸ್‌ನ ಕೆಲವು ನಾಯಕರು ಬಿಜೆಪಿ ಜತೆ ಮಾತ್ರ ಸೇರಿ ಕೊಂಡದ್ದಲ್ಲ, ಅವರು ಮಾಧ್ಯಮಗಳ ಜತೆಯೂ ಸೇರಿಕೊಂಡಿದ್ದಾರೆ ಎಂದು ಮಾಜಿ ಸಂಸದೆ ರಮ್ಯಾ ಆರೋಪಿಸಿದ್ದಾರೆ.ರಾಹುಲ್‌ ಗಾಂಧಿ ಮಾಡಿರುವ ಆರೋಪಕ್ಕೆ ಪೂರಕವಾಗಿ ಇವರು ಮೇಲಿನ ಆರೋಪದ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.