ರೈತನ ಕಷ್ಟ ಏನು ಎನ್ನುವುದು ಗದ್ದೆಯಲ್ಲಿ ಅರಿವಾಯಿತು;ನೇಜಿ ನಟ್ಟು ಸಿಎಂ


Team Udayavani, Aug 11, 2018, 2:24 PM IST

ಮಂಡ್ಯ: ‘ರೈತನ ಕಷ್ಟ ಏನು ಎನ್ನುವುದು ನನಗೆ ಇಂದು ಕೆಸರು ಗದ್ದೆಯಲ್ಲಿ ಅರಿವಾಯಿತು. 25 ವರ್ಷಗಳ ಬಳಿಕ ಗದ್ದೆಗಿಳಿದು ಕೆಲಸ ಮಾಡಿದೆ. ಇದು ನನ್ನ ಜೀವನದಲ್ಲಿ  ಮರೆಯಲಾರದ ದಿನ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಸೀತಾಪುರದ ಜಮೀನಿನಲ್ಲಿ ಶನಿವಾರ ನೇಜಿ ನಟ್ಟು ಹೇಳಿದರು.

ರೈತರನ್ನುದ್ದೇಶಿಸಿ ಮಾತನಾಡಿದ ಸಿಎಂ ‘ನಾನು ರಾಜ್ಯದ ಜನತೆಗೆ ಸಂದೇಶ ಕೊಡಲು ಇಲ್ಲಿಗೆ ಬಂದಿದ್ದೇನೆ. ಬರೀ ಮಂಡ್ಯಕ್ಕಾಗಿ ಅಲ್ಲ’ ಎಂದರು.

‘ರೈತ ಸಾಲಗಾರರ ಕಾಟದಿಂದ ಮುಕ್ತ ವಾಗಬೇಕು ಎನ್ನುವುದು ನನ್ನ ಪರಮಗುರಿ’ ಎಂದರು.

‘ಇದು ನಿಮ್ಮ ಸರ್ಕಾರ. ಇದನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ ,ದುಪ್ಪಟ್ಟು ಕೆಲಸ ಮಾಡಲು ನಾನು ಸಿದ್ದನಿದ್ದೇನೆ. ನನ್ನ ಮೇಲೆ ಯಾರೂ ಸಂಶಯ ಪಡಬೇಡಿ’ ಎಂದರು.

‘ನನಗೆ ನಗರ ಬೇರೆ ಅಲ್ಲ, ಗ್ರಾಮೀಣ ಪ್ರದೇಶ ಬೇರೆ ಅಲ್ಲ. ಎರಡನ್ನೂ ಸಮಾನವಾಗಿ ಕಾಣುವವನು ನಾನು . ನಗರಕ್ಕೆ ಉದ್ಯೋಗ ಅರಸಿ ಬಂದಿರುವ ಯುವ ಜನತೆ ಪುನಃ  ನಿಮ್ಮ ಹಳ್ಳಿಗಳಿಗೆ ಮರಳಿ ತಂದೆ-ತಾಯಿಗಳೊಂದಿಗೆ ಬದುಕಬೇಕು.ಇದಕ್ಕಾಗಿ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಪ್ರೋತ್ಸಾಹ ನೀಡುತ್ತದೆ’ ಎಂದರು.

‘ನಾನು ಬೆಂಗಳೂರಿನಲ್ಲಿ ಕೂರುವುದಿಲ್ಲ.ನಾನು 30 ಜಿಲ್ಲೆಯ ಪ್ರತಿನಿಧಿ. 30 ಜಿಲ್ಲೆಗಳನ್ನೂ ದತ್ತು ತೆಗೆದುಕೊಳ್ಳುತ್ತೇನೆ. ಮೂವತ್ತು ಜಿಲ್ಲೆಗಳ ರೈತರು ನನ್ನವರು . ನನ್ನ ರೈತ ಮುಂದೆಂದೂ ಸಾಲಗಾರನಾಗಬಾರದು . ಯಾರೂ ಆತನ ಮನೆ ಬಾಗಿಲಿಗೆ ಸಾಲ ವಸೂಲಿಗೆಂದು ಬರಬಾರದು. ಅಂತಹ ಯೋಜನೆಗಳನ್ನು ಸರ್ಕಾರದಿಂದ ಜಾರಿ ಮಾಡುತ್ತೇನೆ’ ಎಂದರು.

‘ಯಾವೊಬ್ಬ ರೈತನು ಆತ್ಮಹತ್ಯೆ ಮಾಡಿಕೊಳ್ಳಬಾರದು. ನಮ್ಮದ್ದು ರೈತ ಪರ ಸರ್ಕಾರ. 70 ವರ್ಷ ಕಳೆದಿದ್ದೀರಿ, ನನಗೆ ಇನ್ನೂ ನಾಲ್ಕೈದು ತಿಂಗಳು ಅವಕಾಶ ನೀಡಿ’ ಎಂದರು.

ಶುಗರ್‌ ಫ್ಯಾಕ್ಟರಿಗೆ ಪುನರ್‌ ಜೀವ

‘ಏಳೇಳು ಜನ್ಮದಲ್ಲಿ ಮಂಡ್ಯ ನಾಡಿನ ಜನರ ಋಣವನ್ನು ತೀರಿಸುವುದು ಸಾಧ್ಯವಿಲ್ಲ. ಮಂಡ್ಯ ಶುಗರ್‌ ಫ್ಯಾಕ್ಟರಿಗೆ ಪುನರ್‌ ಜೀವ ಕೊಡುತ್ತೇನೆ, ಪಾಂಡವಪುರ ಶುಗರ್‌ ಫ್ಯಾಕ್ಟರಿಗೂ ಜೀವ ಕೊಡುತ್ತೇನೆ. ಸದ್ಯದಲ್ಲೇ ಪ್ರಾರಂಭ ಮಾಡುತ್ತೇನೆ’ ಎಂದು ಆಶ್ವಾಸನೆ ನೀಡಿದರು.

ನೂಕು ನುಗ್ಗಲು ನಾಟಿಗೆ ಪರದಾಟ !
ಸಿಎಂ ಕಂಡ ಬಳಿಕ ನೂರಾರು ಜನರು ಮುಗಿಬಿದ್ದ ಹಿನ್ನಲೆಯಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು. ಆದರೂ ಸಿಎಂ 10 ನಿಮಷಗಳ ಕಾಲ ನೇಜಿ ನಟ್ಟರು.

ರೈತರೊಂದಿಗೆ ಭೋಜನ 
ರಾಗಿಮುದ್ದೆ , ಹೆಸರು ಬೇಳೆ ಪಾಯಸ, ಅವರೆ ಕಾಳು ಕೂಟು ಸೇರಿದಂತೆ ವಿಶೇಷವಾದ ಸ್ಥಳೀಯ ಖಾದ್ಯಗಳನ್ನು ಸಿದ್ದಪಡಿಸಲಾಗಿತ್ತು. ಸಿಎಂ ಗದ್ದೆ ಬದಿಯಲ್ಲೇ ರೈತರೊಂದಿಗೆ ಊಟ ಮಾಡಿದರು.

ನಿರ್ಮಲಾನಂದ ಶ್ರೀಗಳು ಭಾಗಿ 
ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ನಿರ್ಮಲಾನಂದ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ರೈತರಿಗೆ ಆಶೀರ್ವಚನ ನೀಡಿದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.