ನೆಚ್ಚಿನ ಅಂಬಿ ಅಂತಿಮ ದರ್ಶನಕ್ಕೆ ಜನಸಾಗರ;ಕಣ್ಣೀರಿಟ್ಟ ಗಣ್ಯಾತೀಗಣ್ಯರು
Team Udayavani, Nov 25, 2018, 9:59 AM IST
ಬೆಂಗಳೂರು: ಶನಿವಾರ ರಾತ್ರಿ ವಿಧಿವಶರಾದ ಸ್ಯಾಂಡಲ್ವುಡ್ನ ಹಿರಿಯ ನಟ ಹಾಗೂ ಕೇಂದ್ರದ ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ಕಣ್ಣೀರಿನ ವಿದಾಯ ಹೇಳಲಾಗುತ್ತಿದೆ.
ಕಂಠೀರವ ಸ್ಟೇಡಿಯಂನಲ್ಲಿ ಮಂಡ್ಯದ ಗಂಡು ಅಂಬರೀಶ್ ಅವರು ರಾಷ್ಟ್ರಧ್ವಜ ಹೊತ್ತು ಗಾಂಭೀರ್ಯದಲ್ಲಿ ಮಲಗಿದ್ದು, ಗಣ್ಯಾತೀಗಣ್ಯರು ಮತ್ತು ಅಭಿಮಾನಿಗಳು ಅಂತಿಮ ದರ್ಶನ ಪಡೆದು ಕಣ್ಣೀರಿಡುತ್ತಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪತ್ನಿ ಚನ್ನಮ್ಮ, ಪುತ್ರ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಜೊತೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು. ಅಂಬರೀಶ್ ಅವರ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರಿಗೆ ಸಾಂತ್ವನ ಹೇಳಿದರು.
ಸೂಪರ್ಸ್ಟಾರ್ ರಜನಿಕಾಂತ್ ಅವರು ಅಂತಿಮ ದರ್ಶನಕ್ಕೆ ಆಗಮಿಸಿ ನೆಚ್ಚಿನ ಮಿತ್ರನನ್ನು ನೆನೆದು ಕಣ್ಣೀರಿಟ್ಟರು. ಈ ವೇಳೆ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ಬಿಕ್ಕಿ ಬಿಕ್ಕಿ ಅತ್ತರು. ಕೆಲ ಹೊತ್ತು ಕುಳಿತು ತನ್ನ ನೆಚ್ಚಿನ ಮಿತ್ರನ ನೆನಪುಗಳನ್ನು ಮೆಲುಕು ಹಾಕಿ ರಜನಿಕಾಂತ್ ನಿರ್ಗಮಿಸಿದರು.
ಮಂಡ್ಯ ಮೈಸೂರು ಭಾಗದಿಂದ ಸಾವಿರಾರು ಅಭಿಮಾನಿಗಳು ವಿಶೇಷ ಬಸ್ಗಳು ಮತ್ತು ನೂರಾರು ವಾಹನಗಳಲ್ಲಿ ಅಂತಿಮ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ.
ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಮಂಡ್ಯಕ್ಕೆ ತರಬೇಕು ಎಂಬ ಒತ್ತಾಯ ಮಂಡ್ಯದ ಜನರಿಂದ ಕೇಳಿಬರಲಾರಂಭಿ ಸಿತ್ತು. ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರಬೇಕು ಎಂದು ಆಗ್ರಹಿಸಿ ಮಧ್ಯರಾತ್ರಿ ಮಂಡ್ಯದಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ