ಸ್ವತಂತ್ರ ಧರ್ಮಕ್ಕೆ ಶಿಫಾರಸು ಶೀಘ್ರ ಕಳುಹಿಸಿ
Team Udayavani, Nov 3, 2017, 10:50 AM IST
ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಸಲಹೆ ಪಡೆದು ಆದಷ್ಟು ಶೀಘ್ರ ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಲಿಂಗಾಯತ ನಾಯಕರು ಒತ್ತಾಯಿಸಿದ್ದಾರೆ.
ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎಂ.ಬಿ.ಪಾಟೀಲ, ವಿನಯ ಕುಲಕರ್ಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ದೇಶದ ಏಳನೇ ಧರ್ಮವಾಗಲು ಲಿಂಗಾಯತ ಧರ್ಮ ಎಲ್ಲ ಅರ್ಹತೆ ಹೊಂದಿದೆ. ಮುಖ್ಯಮಂತ್ರಿಯವರು ವಿಳಂಬ ತೋರದೆ ಶಿಫಾರಸು ಮಾಡಬೇಕೆಂದರು.
ರಾಜ್ಯ ಸರಕಾರಕ್ಕೆ ಮಾತೆ ಮಹಾದೇವಿಯವರು, ವಿರಕ್ತ ಮಠಾಧೀಶರು ಹಾಗೂ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಸಮಿತಿಯಿಂದ ಪ್ರತ್ಯೇಕವಾಗಿ ಮೂರು ಮನವಿ ಸಲ್ಲಿಸಿದ್ದು, ವೀರಶೈವ ಮಹಾಸಭಾದಿಂದ ವೀರಶೈವ- ಲಿಂಗಾಯತ ಎಂದು, ಪಂಚಪೀಠಾಧೀಶರರು ವೀರಶೈವ ಧರ್ಮ ಎಂದು ಒಟ್ಟು ಐದು ಮನವಿ ಸಲ್ಲಿಕೆಯಾಗಿವೆ.
ಮನವಿಗಳ ಪೂರಕ ಅಂಶ, ದಾಖಲೆಗಳನ್ನು ಕಾನೂನು ತಜ್ಞರಿಂದ ಸಿಎಂ ಮಾಹಿತಿ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದರು.
ಶೆಟ್ಟರ್ ಸಂಪರ್ಕಿಸಲು ಯತ್ನ
ಧಾರವಾಡ: ಹುಬ್ಬಳ್ಳಿಯಲ್ಲಿ ನ.5ರಂದು ನಡೆಯಲಿರುವ ಲಿಂಗಾಯತ ಸಮಾವೇಶಕ್ಕೆ ಹುಬ್ಬಳ್ಳಿಯವರೇ ಆದ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಹೇಳಿದರು. ನಗರದಲ್ಲಿ ಗುರುವಾರ ಮಾತನಾಡಿ, ಡಿಸೆಂಬರ್ನಲ್ಲಿ ಬೆಂಗಳೂರಿನಲ್ಲಿ ಜರುಗುವ ಸಮಾವೇಶಕ್ಕೆ ಯಡಿಯೂರಪ್ಪ ಅವರಿಗೂ ಆಹ್ವಾನ ಕೊಡುತ್ತೇವೆ. ಬಸವಣ್ಣ ಯಾವ ಪಕ್ಷಕ್ಕೂ ಸೇರಿದವರಲ್ಲ. ಹೀಗಾಗಿ, ಯಾರೇ ಬಂದರೂ ಆಹ್ವಾನವಿದೆ. ಇದು ಅನುಭವ ಮಂಟಪವಿದ್ದಂತೆ. ಎಲ್ಲ ಪಕ್ಷದವರನ್ನೂ ಕರೆಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ