ಸಹಕಾರ ಸಂಘಗಳಲ್ಲಿ ಮೀಸಲಾತಿ ಜಾರಿಗೆ ಸಮಿತಿಯಿಂದ ಶಿಫಾರಸು
Team Udayavani, Dec 19, 2018, 8:34 AM IST
ವಿಧಾನಸಭೆ: ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಸಹಕಾರ ಸಂಘಗಳು ಮತ್ತು ಬ್ಯಾಂಕುಗಳಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ಕಲ್ಪಿಸಲು ಸಹಕಾರ ಕಾನೂನಿಗೆ ತಿದ್ದುಪಡಿ ತರುವಂತೆ ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.
ಸಮಿತಿಯ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಮಂಗಳವಾರ ಸದನದಲ್ಲಿ ವರದಿ ಮಂಡಿಸಿದ್ದು, ಪ್ರಸ್ತುತ ಸಹಕಾರ ಸಂಘಗಳು ಮತ್ತು ಬ್ಯಾಂಕುಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಇರುವುದಿಲ್ಲ. ಹೀಗಾಗಿ, ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಮೀಸಲಾತಿ ಕಲ್ಪಿಸಬೇಕೆಂದು ಶಿಫಾರಸು ಮಾಡಿದೆ. ಕೃಷಿ ಮಾರುಕಟ್ಟೆ ಸಮಿತಿಯು ಮಳಿಗೆಗಳನ್ನು ಹಂಚು ವಾಗ ಪರಿಶಿಷ್ಟ ಜಾತಿ ಹಾಗೂ ಪಂಗಡದ ನಿರುದ್ಯೋಗಿ ಯುವಕರಿಗೆ ಮೀಸಲಾತಿ ಕಲ್ಪಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ವಿದ್ಯಾರ್ಥಿ ವೇತನ ಪಡೆಯಲು ಸರ್ಕಾರಿ ಡಿ ಮತ್ತು ಸಿ ವೃಂದದ ನೌಕರರ ಮಕ್ಕಳಿಗೂ ಆನುಕೂಲವಾಗುವಂತೆ
ವಾರ್ಷಿಕ ಆದಾಯ ಮಿತಿ ಹೆಚ್ಚಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯಗೊಳಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ಏಕಕಾಲದಲ್ಲಿ ನಿಯಮಾವಳಿ ರೀತಿ ಖರೀದಿ ಹಾಗೂ ನಿರ್ವಹಣೆಗೆ ಆಯಾ ತಾಲೂಕಿನಲ್ಲಿ ಮಾಡಬೇಕು. ಅದಕ್ಕಾಗಿ ಓರ್ವ ನೋಡಲ್ ಅಧಿಕಾರಿ ನೇಮಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರದ
ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಸೌಲಭ್ಯ ವಂಚಿತರನ್ನಾಗಿ ಮಾಡುತ್ತಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕು.
ಇಂತಹ ಪ್ರಕರಣಗಳಲ್ಲಿ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಶೀಘ್ರ ತನಿಖೆ ನಡೆಸಿ ಶಿಕ್ಷೆ ಪ್ರಕಟಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು