Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

ಬಾಂಗ್ಲಾದೇಶ ಸೇರಿ ವಿದೇಶಿ ನೋಟುಗಳೂ ಇವೆ..

Team Udayavani, Mar 27, 2024, 9:44 AM IST

1-wr3

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಾಲಯದ ಹುಂಡಿಗಳಲ್ಲಿ ಕೇವಲ 25 ದಿನಗಳಲ್ಲಿ ದಾಖಲೆಯ 3.13 ಕೋಟಿ ರೂ. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಹುಂಡಿಗಳಿಂದ ಸಂಗ್ರಹವಾದ ಅತಿ ಹೆಚ್ಚಿನ ಮೊತ್ತ ಇದಾಗಿದೆ. ಇದುವರೆಗೆ ತಿಂಗಳೊಂದರಲ್ಲಿ 2.90 ಕೋಟಿ ರೂ. ಸಂಗ್ರಹವಾಗಿದ್ದು ದಾಖಲೆಯಾಗಿತ್ತು.ಮಾರ್ಚ್ 1 ರಿಂದ 25ನೇ ತಾರೀಕಿನವರೆಗೆ ಹುಂಡಿಗಳಲ್ಲಿ ಸಂಗ್ರಹವಾದ ಹಣದ ಎಣಿಕೆ ಮಂಗಳವಾರ ನಡೆಯಿತು. ಬೆಳಿಗ್ಗೆ 7ಕ್ಕೆ ಆರಂಭವಾದ ಹುಂಡಿಗಳ ಎಣಿಕೆ ಕಾರ್ಯ ತಡರಾತ್ರಿ 10.40ಕ್ಕೆ ಪೂರ್ಣಗೊಂಡಿತು. ಒಟ್ಟು 3,13,00,931 ರೂ. ಹುಂಡಿಗಳಲ್ಲಿ ಸಂಗ್ರಹವಾಗಿದೆ. 2,98,41,802 ರೂ. ನೋಟುಗಳ ಮೂಲಕ ಹಾಗೂ 14,59,129 ರೂ. ನಾಣ್ಯಗಳ ಮೂಲಕ ಸಂಗ್ರಹವಾಗಿದೆ. ಇದಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 300 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. 2 ಅಮೆರಿಕನ್ ಡಾಲರ್, 1 ಬಾಂಗ್ಲಾದೇಶದ ನೋಟು, ನೇಪಾಳ ದೇಶದ 2 ನೋಟು, ಮಲೇಶಿಯಾದ 1 ನೋಟುಗಳು ದೊರೆತಿವೆ.

ಮಾರ್ಚ್ ತಿಂಗಳಲ್ಲಿ ಮಹಾಶಿವರಾತ್ರಿ ಜಾತ್ರೆಯಿದ್ದುದ್ದರಿಂದ ಒಂದು ವಾರದ ಜಾತ್ರೆ ಅವಧಿಯಲ್ಲಿ 8 ಲಕ್ಷ ಭಕ್ತಾದಿಗಳು ಬೆಟ್ಟಕ್ಕೆ ಭೇಟಿ ನೀಡಿದ್ದರು. ಜಾತ್ರೆ ಮತ್ತು ಸ್ತ್ರೀ ಶಕ್ತಿ ಯೋಜನೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಇವೆಲ್ಲವೂ ಸೇರಿ ತಿಂಗಳೊಂದರಲ್ಲಿ 3.13 ಕೋಟಿ ದಾಖಲೆಯ ಆದಾಯಕ್ಕೆ ಕಾರಣವಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಉದಯವಾಣಿಗೆ ತಿಳಿಸಿದರು.

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಹಿತಿ ಕೇಂದ್ರದ ಕಟ್ಟಡದಲ್ಲಿ ಎಣಿಕೆ ಕಾರ್ಯ ನಡೆಯಿತು. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ, ಪ್ರಾಧಿಕಾರದ ಉಪಕಾರ್ಯದರ್ಶಿ ಚಂದ್ರಶೇಖರ ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರ ನಾಗೇಶ್, ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ಶಾಖೆಯ ಶ್ವೇತಾ, ಪ್ರಾಧಿಕಾರದ ಸಿಬ್ಬಂದಿ ಎಣಿಕೆಯಲ್ಲಿ ಭಾಗವಹಿಸಿದ್ದರು.ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿ ಎಣಿಕೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.