
ಸಾರಿಗೆ ನಿಗಮಗಳಲ್ಲಿ 2,814 ಸಿಬ್ಬಂದಿ ನೇಮಕ: ಸಚಿವ ಶ್ರೀರಾಮುಲು
Team Udayavani, Sep 21, 2022, 9:03 PM IST

ವಿಧಾನಸಭೆ: ರಾಜ್ಯದ ಸಾರಿಗೆ ನಿಗಮಗಳಲ್ಲಿ ಹೊಸದಾಗಿ 2,814 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣವರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಸಂಸ್ಥೆಯಲ್ಲಿ 2,500 ಚಾಲಕ, 55 ಚಾಲಕ ಬ್ಯಾಕ್ಲಾಗ್ ಮತ್ತು 259 ಚಾಲಕ-ಕಂ-ನಿರ್ವಾಹಕ ಬ್ಯಾಕ್ಲಾಗ್ ಸೇರಿದಂತೆ ಒಟ್ಟು 2,814 ಹುದ್ದೆಗಳ ನೇಮಕಾತಿಗೆ 2019ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು.
ಕೋವಿಡ್-19 ಕಾರಣದಿಂದ ನೇಮಕಾತಿ ಸ್ಥಗಿತಗೊಂಡಿತ್ತು. ಈಗ ಪ್ರಸ್ತಾವನೆ ಸ್ವೀಕೃತಗೊಂಡಿದ್ದು, ಪರಿಶೀಲನೆಯಲ್ಲಿದೆ. ಸಿಬ್ಬಂದಿ ನೇಮಕದ ನಂತರ ಘಟಕಗಳಿಗೆ ಅವಶ್ಯಕತೆಗೆ ಅನುಗುಣವಾಗಿ ನಿಯೋಜಿಸಲಾಗುವುದು ಎಂದರು.
ಕೋವಿಡ್ ಕಾರಣದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಳೆದ 2 ವರ್ಷಗಳಿಂದ ಯಾವುದೇ ಬಸ್ಗಳನ್ನು ಖರೀದಿಸಿರುವುದಿಲ್ಲ. ಆದರೆ, ಒಟ್ಟಾರೆ ಇಲಾಖೆಯಲ್ಲಿ 650 ಬಸ್ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ಹೊಸ ಬಸ್ಗಳು ಖರೀದಿಸಿದ ಮೇಲೆ ಬೇಡಿಕೆ ಆಧರಿಸಿ ಆದ್ಯತೆ ಮೇಲೆ ಬಸ್ಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್

ಮಣಿಪಾಲ: ಶಿವಪಾಡಿಯಲ್ಲಿ”ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್”ಪೂರ್ವ ಸಿದ್ಧತೆ ಸಭೆ

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
