ಸಾರಿಗೆ ನಿಗಮಗಳಲ್ಲಿ 2,814 ಸಿಬ್ಬಂದಿ ನೇಮಕ: ಸಚಿವ ಶ್ರೀರಾಮುಲು
Team Udayavani, Sep 21, 2022, 9:03 PM IST
ವಿಧಾನಸಭೆ: ರಾಜ್ಯದ ಸಾರಿಗೆ ನಿಗಮಗಳಲ್ಲಿ ಹೊಸದಾಗಿ 2,814 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣವರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಸಂಸ್ಥೆಯಲ್ಲಿ 2,500 ಚಾಲಕ, 55 ಚಾಲಕ ಬ್ಯಾಕ್ಲಾಗ್ ಮತ್ತು 259 ಚಾಲಕ-ಕಂ-ನಿರ್ವಾಹಕ ಬ್ಯಾಕ್ಲಾಗ್ ಸೇರಿದಂತೆ ಒಟ್ಟು 2,814 ಹುದ್ದೆಗಳ ನೇಮಕಾತಿಗೆ 2019ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು.
ಕೋವಿಡ್-19 ಕಾರಣದಿಂದ ನೇಮಕಾತಿ ಸ್ಥಗಿತಗೊಂಡಿತ್ತು. ಈಗ ಪ್ರಸ್ತಾವನೆ ಸ್ವೀಕೃತಗೊಂಡಿದ್ದು, ಪರಿಶೀಲನೆಯಲ್ಲಿದೆ. ಸಿಬ್ಬಂದಿ ನೇಮಕದ ನಂತರ ಘಟಕಗಳಿಗೆ ಅವಶ್ಯಕತೆಗೆ ಅನುಗುಣವಾಗಿ ನಿಯೋಜಿಸಲಾಗುವುದು ಎಂದರು.
ಕೋವಿಡ್ ಕಾರಣದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಳೆದ 2 ವರ್ಷಗಳಿಂದ ಯಾವುದೇ ಬಸ್ಗಳನ್ನು ಖರೀದಿಸಿರುವುದಿಲ್ಲ. ಆದರೆ, ಒಟ್ಟಾರೆ ಇಲಾಖೆಯಲ್ಲಿ 650 ಬಸ್ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ಹೊಸ ಬಸ್ಗಳು ಖರೀದಿಸಿದ ಮೇಲೆ ಬೇಡಿಕೆ ಆಧರಿಸಿ ಆದ್ಯತೆ ಮೇಲೆ ಬಸ್ಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್