ಅನುದಾನಿತ ಶಾಲೆಗಳಿಗೆ ಶಿಕ್ಷಕರ ಭರ್ತಿಗೆ ಒಕ್ಕೊರಲ ಒತ್ತಾಯ
Team Udayavani, Feb 17, 2023, 5:40 AM IST
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಶಾಲಾ- ಕಾಲೇಜುಗಳಲ್ಲಿ 2016ರಿಂದ ಈಚೆಗೆ ಖಾಲಿಯಾಗಿರುವ ಬೋಧಕ ಹುದ್ದೆಗಳ ಭರ್ತಿಗೆ ಸರಕಾರ ಕ್ರಮ ಕೈಗೊಳ್ಳುವಂತೆ ಸಭಾಪತಿ ಬಸವರಾಜ ಹೊರಟ್ಟಿಯೂ ಸೇರಿದಂತೆ ಪಕ್ಷಾತೀತವಾಗಿ ಒತ್ತಾಯ ಕೇಳಿಬಂತು. ಕೊನೆಗೆ ಈ ಸಂಬಂಧ ಫೆ. 23ರಂದು ಸಭೆ ನಡೆಸಿ ಅಲ್ಲಿ ತೀರ್ಮಾನ ಕೈಗೊಳ್ಳಲು ಸಭಾಪತಿಗಳು ಸೂಚಿಸಿದರು.
ಗುರುವಾರ ನಿಯಮ 72ರ ಅಡಿ ಜೆಡಿಎಸ್ನ ಮರಿತಿಬ್ಬೇಗೌಡ ವಿಷಯ ಪ್ರಸ್ತಾವಿಸಿ, ಕಳೆದ ಏಳು ವರ್ಷಗಳಿಂದ ಬೋಧಕರ ಹುದ್ದೆಗಳು ಖಾಲಿ ಇವೆ. ಬೋಧಕರಿಲ್ಲದೆ ಖಾಸಗಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಮಂಜೂರಾದ ಹುದ್ದೆಗಳ ಭರ್ತಿಗೆ ವಿಳಂಬ ಮಾಡುವುದು ಸರಿಯಲ್ಲ. 2022ರವರೆಗೂ ಖಾಲಿಯಾದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಕ್ಕೆ ದನಿಗೂಡಿಸಿದ ಆಡಳಿತ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ನನ್ನ ಕ್ಷೇತ್ರದಲ್ಲಿ ಐದು ಜಿಲ್ಲೆಗಳು ಬರುತ್ತಿದ್ದು, ಸುಮಾರು 60 ಶಾಲೆಗಳಿವೆ. ಅಲ್ಲೆಲ್ಲ ಒಬ್ಬರು ಗರಿಷ್ಠ ಇಬ್ಬರು ಶಿಕ್ಷಕರಿದ್ದಾರೆ. ಒಂದೆಡೆ ನಾವು ಗುಣಾತ್ಮಕ ಶಿಕ್ಷಣ ಬೇಕು ಎನ್ನುತ್ತೇವೆ. ಮತ್ತೂಂದೆಡೆ ಶೇ. ನೂರರಷ್ಟು ಫಲಿತಾಂಶವನ್ನೂ ಬಯಸುತ್ತೇವೆ. ಇದು ಹೇಗೆ ಸಾಧ್ಯ? ಈ ವಿಚಾರದಲ್ಲಿ ನನ್ನದೂ ಆಕ್ಷೇಪ ಇದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೊದಲಿಗೆ 2015ರ ಪೂರ್ವದಲ್ಲಿ ಖಾಲಿಯಾಗಿರುವ ಹುದ್ದೆಗಳ ಭರ್ತಿ ಮಾಡಿ ಬಳಿಕ 2016ರ ಅನಂತರದ ಖಾಲಿ ಹುದ್ದೆಗಳ ಭರ್ತಿಗೆ ನಿಯಮಾನುಸಾರ ಪರಿಶೀಲಿಸುವುದಾಗಿ ತಿಳಿಸಿದರು. ಮಧ್ಯಪ್ರವೇಶಿಸಿದ ಸಭಾಪತಿ ಹೊರಟ್ಟಿ, ಈ ಸಂಬಂಧ ಫೆ. 23ರಂದು ಸಭೆ ನಿಗದಿ ಮಾಡಿ. ಈ ಸಭೆಗೆ ಹಣಕಾಸು ಇಲಾಖೆ ಅಧಿಕಾರಿಗಳನ್ನು ಕರೆಸಿ ಚರ್ಚಿಸೋಣ. ಈ ಸಭೆಯ ಅಧ್ಯಕ್ಷತೆ ನಾನೇ ವಹಿಸುತ್ತೇನೆ ಎಂದು ಸಚಿವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ