ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ
Team Udayavani, Aug 19, 2022, 12:25 PM IST
ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಗುರುವಾರ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗ ವಿಭಾಗಗಳ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಬೆಂಗಳೂರು ಮತ್ತು ಬಳ್ಳಾರಿ ವಿಭಾಗಗಳ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರನ್ನು ನೇಮಕ ಮಾಡಲಾಗಿದೆ.
ಬೆಳಗಾವಿ ಮತ್ತು ಮೈಸೂರು ವಿಭಾಗಗಳ ಉಸ್ತುವಾರಿಯಾಗಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಮಂಗಳೂರು ಮತ್ತು ಕಲಬುರಗಿ ವಿಭಾಗಗಳ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಧಾರವಾಡ ಮತ್ತು ದಾವಣಗೆರೆ ವಿಭಾಗಗಳ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ.