ಅಂತ್ಯ ಸಂಸ್ಕಾರಕ್ಕೆ ಸಂಬಂಧಿಕರ ಪರದಾಟ
Team Udayavani, Jan 28, 2019, 1:54 AM IST
ಚಿಂತಾಮಣಿ: ಸುಳ್ವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣ ಮಾಸುವ ಮುನ್ನವೇ, ಚಿಂತಾಮಣಿ ಗಂಗಮ್ಮ ದೇವಾಲಯದ ಪ್ರಸಾದ ದುರಂತದಲ್ಲಿ ಇಬ್ಬರು ಮೃತಪಟ್ಟು 12 ಮಂದಿ ಅಸ್ವಸ್ಥರಾದ ಘಟನೆ ಜನತೆಯನ್ನು ಮತ್ತೂಮ್ಮೆ ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಕವಿತಾ ಎಂಬುವವರು ಶನಿವಾರ ಮೃತಪಟ್ಟಿದ್ದು ಮೃತ ದೇಹವನ್ನು ಭಾನುವಾರ ನಗರದ ತಮ್ಮ ನಿವಾಸಕ್ಕೆ ತಂದ ಸಂಬಂಧಿಕರು ಅಂತ್ಯ ಸಂಸ್ಕಾರ ನಡೆಸಲು ಹಣಕಾಸಿನ ಕೊರತೆಯಿಂದ ಪರದಾಡುವಂತಾಯಿತು. ಮೃತ ಕವಿತಾಳ ಕುಟುಂಬಸ್ಥರು ಕೂಲಿ ಮಾಡಿ ಜೀವನ ನಡೆಸುತ್ತಿದ್ದು, ಇಡೀ ಕುಟುಂಬ ಆಸ್ಪತ್ರೆ ಪಾಲಾಗಿದೆ.
ಅಧಿಕಾರಿಗಳ ವಿರುದ್ಧ ಆಕ್ರೋಶ: ಕವಿತಾಳ ಮೃತ ದೇಹವನ್ನು ಮನೆಗೆ ತಂದಿದ್ದ ವೇಳೆ ಸ್ಥಳಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸದೆ ನಿರ್ಲಕ್ಷ್ಯವಹಿಸಿದ್ದಾರೆಂದು ಕವಿತಾಳ ಸಂಬಂಧಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಇನ್ನು ಕೋಲಾರ ಆಸ್ಪತ್ರೆಯಲ್ಲಿ ಮೃತಪಟ್ಟ ಸರಸ್ವತಿ ಅವರ ಮೃತ ದೇಹವನ್ನು ಸಂಬಂಧಿಕರಿಗೆ ನೀಡದ ಆಸ್ಪತ್ರೆ ಸಿಬ್ಬಂದಿ, ಸಂಪೂರ್ಣ ಶುಲ್ಕ ಭರಿಸಿ ಶವವನ್ನು ಕೊಂಡೊಯ್ಯುವಂತೆ ಪಟ್ಟು ಹಿಡಿದ ಪರಿಣಾಮ ಸಂಬಂಧಿಕರು ಗೋಳಾಡಿದ ಪ್ರಸಂಗ ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ನಡೆಯಿತು. ಈ ಮಾಹಿತಿ ಅರಿತ ವಿಧಾನಸಭೆ ಉಪಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಅವರ ಸೂಚನೆ ಮೇರೆಗೆ ಶವವನ್ನು ಸಂಬಂಧಿಕರಿಗೆ ನೀಡಲಾಯಿತು.
ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ಭಾನುವಾರ ಮೃತ ಕವಿತಾಳ ಮನೆಗೆ ಭೇಟಿ ನೀಡಿ ಸಂಬಂಧಿಕರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ 20 ಸಾವಿರ ರೂ. ನೀಡಿ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಿಸುವುದಾಗಿ ಭರವಸೆ ನೀಡಿದರಲ್ಲದೇ, ಆಸ್ಪತ್ರೆಯಲ್ಲಿರುವವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸುವುದಾಗಿ ತಿಳಿಸಿದರು.
ಭಾನುವಾರ ಮಧ್ಯಾಹ್ನ ಕವಿತಾ ಮೃತದೇಹವನ್ನು ಶ್ರೀರಾಮನಗರದ ರುದ್ರಭೂಮಿಯಲ್ಲಿ, ಸರಸ್ವತಿ ಮೃತ ದೇಹವನ್ನು ಗಡಿಮಿಂಚೆನಹಳ್ಳಿಯ ರುದ್ರಭೂಮಿಯಲ್ಲಿ ಅತ್ಯ ಸಂಸ್ಕಾರ ಮಾಡಲಾಯಿತು. ಇನ್ನು ಘಟನೆ ನಡೆದ ನರಸಿಂಹಪೇಟೆಯ ಗಂಗಮ್ಮ ದೇವಾಲಯದಲ್ಲಿ ಎಂದಿನಂತೆ ದೇವಿಗೆ ಪೂಜೆ ಮಾಡಿ ನಂತರ ಬಾಗಿಲು ಹಾಕಲಾಯಿತು.
ಆರೋಗ್ಯದಲ್ಲಿ ಸುಧಾರಣೆ
ಪ್ರಸಾದ ಸೇವಿಸಿ ಅಸ್ವಸ್ಥರಾಗಿರುವ ಪೈಕಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಕೋಲಾರ, ಚಿಂತಾಮಣಿ ಮತ್ತು ಹೊಸಕೋಟೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ದೇವಾಲಯದ ಆವರಣದಲ್ಲಿ ಖಾಸಗಿ ವ್ಯಕ್ತಿಗಳಿಂದ ಪ್ರಸಾದ ಹಂಚಿಕೆ ಮಾಡಿದ್ದರಿಂದ ದೇವಾಲಯದ ಆಡಳಿತ ಮಂಡಳಿಗೆ ನೋಟಿಸ್ ನೀಡುವುದಾಗಿ ಪ್ರೊಬೆಷನರಿ ಎಸಿ ಅಶೋಕ್ ತೇಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?