ಕೇಂದ್ರ ಸರಕಾರದ ಜನಪರ ಯೋಜನೆಗಳ ಪುಸ್ತಕ ಬಿಡುಗಡೆ
100 ಕ್ಕೂ ಹೆಚ್ಚು ಜನಪರ ಯೋಜನೆಗಳ ವಿವರ....
Team Udayavani, Aug 21, 2022, 6:31 PM IST
ಬೆಂಗಳೂರು: ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಜನಪರ ಯೋಜನೆಗಳ ವಿವರವನ್ನು ಒಳಗೊಂಡಿರುವ “ನವ ಭಾರತಕ್ಕಾಗಿ ಹೊಸ ಯೋಜನೆಗಳು” “ನ್ಯೂ ಸ್ಕೀಮ್ಸ್ ಫಾರ್ ನ್ಯೂ ಇಂಡಿಯಾ” ಪುಸ್ತಕಗಳನ್ನು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಡುಗಡೆಗೊಳಿಸಿದರು.
ಕೇಂದ್ರದ ಜನಪರ ಯೋಜನೆಗಳ ಮಾಹಿತಿಯುಳ್ಳ ಈ ಪುಸ್ತಕದ ಮೂಲಕ ಜನರನ್ನು ಮತ್ತು ಇನ್ನಷ್ಟು ಫಲಾನುಭವಿಗಳನ್ನು ತಲುಪುವಂತಾಗಲಿ ಎಂದು ನಳಿನ್ ಕುಮಾರ್ ಕಟೀಲ್ ಅವರು ಹಾರೈಸಿದರು.
ಕೇಂದ್ರ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಲುಪಲು ಇದು ಪೂರಕ. ಪ್ರಧಾನಿಯವರ ಪ್ರತಿಯೊಬ್ಬರ ಸಶಕ್ತೀಕರಣದ ಕನಸು ನನಸಾಗಲು ಇದು ಸಹಾಯಕ ಎಂದರು.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರರಿಂದ ಮಾಹಿತಿ ಪಡೆದು ಈ ಪುಸ್ತಕವನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಹೊರತರಲಾಗಿದೆ. ಈ ಪುಸ್ತಕವು ವಿವಿಧ ಯೋಜನೆಗಳ ಅರ್ಹತಾ ಮಾನದಂಡಗಳು ಮತ್ತು ಅರ್ಜಿಯ ಕಾರ್ಯವಿಧಾನವನ್ನು ಒಳಗೊಂಡಂತೆ ಎಲ್ಲ ಯೋಜನೆಗಳ ವಿವರಗಳನ್ನು ಒಳಗೊಂಡಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಉಜ್ವಲಾ, ಉಜಾಲಾ, ಮುದ್ರಾ, ಸ್ಕಿಲ್ ಇಂಡಿಯಾ, ಜನ ಔಷಧಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಸ್ವಚ್ಛ ಭಾರತ್, ಮೇಕ್ ಇನ್ ಇಂಡಿಯಾ, ಸುರಕ್ಷಿತ ಮಾತೃತ್ವ, ಬೇಟಿ-ಬಚಾವೋ ಬೇಟಿ-ಪಡಾವೋ, ಡಿಜಿಟಲ್ ಇಂಡಿಯಾ, ಖೇಲೋ ಸೇರಿದಂತೆ ಕೆಲವು ಪ್ರಮುಖ ಯೋಜನೆಗಳ ಮಾಹಿತಿ ಇದರಲ್ಲಿದೆ.
ಸುಕನ್ಯಾ ಸಮೃದ್ಧಿ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ ಯೋಜನೆ, ಸಮರ್ಥ ಯೋಜನೆ, ರಾಷ್ಟ್ರೀಯ ವಯೋಶ್ರೀ ಯೋಜನೆ, ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ, ಪ್ರಧಾನ ಮಂತ್ರಿ ಕೃಷಿ ಕಲ್ಯಾಣ ಅಭಿಯಾನ, ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ ಸೇರಿದಂತೆ 100 ಕ್ಕೂ ಹೆಚ್ಚು ಯೋಜನೆಗಳ ವಿವರವಿದ್ದು, ಸಮಾಜದ ಪ್ರತಿಯಿಂದು ವರ್ಗಕ್ಕೆ ತಲುಪಲು ಇದು ನೆರವಾಗಲಿದೆ ಎಂದು ವಿವರಿಸಿದರು.
ಸ್ಕೀಮ್ ವೆಬ್ ಪುಟಗಳಿಗಾಗಿ ಕ್ಯೂಆರ್ ಕೋಡ್ಗಳನ್ನು ನೀಡಲಾಗಿದೆ. ಸ್ಕ್ಯಾನ್ ಮಾಡುವ ಮೂಲಕ ನೇರವಾಗಿ ಆಯಾ ವೆಬ್ ಪುಟಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಸ್ಕೀಮ್ ಮಾಹಿತಿಯನ್ನು ಪಡೆಯಬಹುದು ಎಂದು ಪ್ರಕಾಶಕರು ತಿಳಿಸಿದ್ದಾರೆ.
ಬೀದರ್ ಉತ್ತರ ಕ್ಷೇತ್ರದಲ್ಲಿ ಇದರ ಪ್ರತಿಯನ್ನು ಮನೆ ಮನೆಗೆ ತಲುಪಿಸಿ ಸರ್ಕಾರದ ಯೋಜನೆಗಳ ಬಗ್ಗೆ ತಿಳಿವಳಿಕೆ ನೀಡುವ ಮತ್ತು ಅರ್ಹ ಫಲಾನುಭವಿಗಳನ್ನು ಅವರ ಮನೆ ಬಾಗಿಲಿಗೆ ದಾಖಲಿಸುವ ಕೆಲಸ ಮಾಡಲಾಗುತ್ತಿದೆ. ನಾವು ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಗ್ರಾಮಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ಸುಮಾರು 20,000 ಕ್ಕೂ ಹೆಚ್ಚು ಮನೆಗಳಿಗೆ ಬಿಜೆಪಿ ಕಾರ್ಯಕರ್ತರು, ಹಿತೈಷಿಗಳು, ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ನ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಪಕ್ಷದ ಹಾಸನ ಜಿಲ್ಲಾಧ್ಯಕ್ಷ ಹುಲ್ಲಳ್ಳಿ ಸುರೇಶ್, ಸಕಲೇಶಪುರದ ಮುಖಂಡ ನಾರ್ವೆ ಸೋಮಶೇಖರ್, ಮುಖಂಡರಾದ ಲಲ್ಲೇಶ್ ರೆಡ್ಡಿ, ನರೇಂದ್ರಬಾಬು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ