ಸಾರಿಗೆ ನೌಕರರ ವೇತನ ಬಿಡುಗಡೆ
Team Udayavani, Aug 24, 2021, 6:53 AM IST
ಬೆಂಗಳೂರು: ಸಾರಿಗೆ ನೌಕರರ ಜುಲೈ ತಿಂಗಳ ವೇತನವನ್ನು ಕೊನೆಗೂ ಸರಕಾರ ಬಿಡುಗಡೆ ಮಾಡಿದ್ದು, ಒಟ್ಟು ವೇತನ ವೆಚ್ಚದ ಶೇ.25ರಷ್ಟನ್ನು ಸೋಮವಾರ ಬಿಡುಗಡೆಗೊಳಿಸಿದೆ.
ವೇತನ ಬಿಡುಗಡೆ ಆಗದ ಬಗ್ಗೆ ಉದಯವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ಕೊರೊನಾದಿಂದ ನಷ್ಟದಲ್ಲಿರುವ ಸಾರಿಗೆ ನಿಗಮಗಳಿಗೆ ನೌಕರರ ವೇತನ ಪಾವತಿ ಕಷ್ಟ ಆಗುತ್ತಿದೆ. ಆದ್ದರಿಂದ ಜುಲೈ ವೇತನಕ್ಕಾಗಿ ಮೂಲವೇತನ ಹಾಗೂ ಭತ್ತೆಯ ಶೇ. 25ರಷ್ಟು ಅಂದರೆ 60.82 ಕೋ. ರೂ. ಬಿಡುಗಡೆ ಮಾಡಲಾಗಿದೆ. ಈ ಪೈಕಿ ಕೆಎಸ್ಆರ್ಟಿಸಿಗೆ 27.74 ಕೋ. ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 17.47 ಕೋ. ರೂ. ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಗೆ 15.61 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ನಾಲ್ಕೂ ನಿಗಮಗಳು ಜುಲೈನಿಂದ ಸೆಪ್ಟಂಬರ್ವರೆಗಿನ ವೇತನ ಪಾವತಿಗಾಗಿ 640.61 ಕೋ. ರೂ. ವಿಶೇಷ ಅನುದಾನ ಬಿಡುಗಡೆ ಮಾಡು ವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಜುಲೈ ತಿಂಗಳಿಗೆ ಸೀಮಿತವಾಗಿ 109.31 ಕೋ. ರೂ. ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ