ಪರಿಹಾರ ಮರೀಚಿಕೆ; ಕೋವಿಡ್‌ನಿಂದ ಮೃತರಿಗೆ 1 ಲಕ್ಷ ರೂ. ನೆರವು ದೂರ


Team Udayavani, Dec 13, 2021, 7:08 AM IST

cಪರಿಹಾರ ಮರೀಚಿಕೆ; ಕೋವಿಡ್‌ನಿಂದ ಮೃತರಿಗೆ 1 ಲಕ್ಷ ರೂ. ನೆರವು ದೂರ

ಬೆಂಗಳೂರು: ಕೊರೊನಾದಿಂದ ಮೃತ ಪಟ್ಟ ಬಿಪಿಎಲ್‌ ಕುಟುಂಬ ಸದಸ್ಯ ರಿಗೆ ಒಂದು ಲಕ್ಷ ರೂ. ಪರಿಹಾರ ನೀಡುವ ರಾಜ್ಯ ಸರಕಾರದ ಘೋಷಣೆ ಇನ್ನೂ ಭರವಸೆ ಯಾಗಿಯೇ ಉಳಿ ದಿದೆ. ದುಡಿಯುವ ವ್ಯಕ್ತಿ ಯನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲು ಕಿರುವ ಕುಟುಂಬಗಳಿಗೆ ಆಸರೆಯಾಗಲು ಕೈಗೊಂಡ ಈ ತೀರ್ಮಾನ ಆರು ತಿಂಗಳಾದರೂ ಅನುಷ್ಠಾನವಾಗಿಲ್ಲ.

ಪರಿಹಾರಕ್ಕೆ ಸಲ್ಲಿಕೆಯಾಗಿದ್ದ ಅರ್ಜಿಗಳು ಜಿಲ್ಲಾಧಿಕಾರಿಗಳಿಂದ ಪರಿಶೀಲನೆಗೊಳಪಟ್ಟು ಅರ್ಹ ಎಂಬ ಮುದ್ರೆ ಒತ್ತಿದ್ದರೂ ಪರಿಹಾರ ಮಾತ್ರ ಕೈ ಸೇರಿಲ್ಲ. ರಾಜ್ಯ ಸರಕಾರದ ಜತೆ ಕೇಂದ್ರ ಸರಕಾರವೂ 50 ಸಾವಿರ ರೂ. ಪರಿಹಾರ ಘೋಷಿ ಸಿತ್ತು. ಬಿಪಿಎಲ್‌ ಮತ್ತು ಎಪಿಎಲ್‌ ಕುಟುಂಬ ದವರಿಗೆ ಕೇಂದ್ರದ ಪರಿಹಾರ ತಲುಪಿದೆ. ಆದರೆ ರಾಜ್ಯ ಸರಕಾರ ಬಿಪಿಎಲ್‌ ಕುಟುಂಬ ದವರಿಗೆ ಘೋಷಿಸಿದ ಪರಿಹಾರ ತಲುಪಿಲ್ಲ.

ಅರ್ಜಿ ಹಾಕಲು ಅಡ್ಡಿ
ಬಿಪಿಎಲ್‌ ಕುಟುಂಬಗಳಲ್ಲಿ ದುಡಿಯುವ ವಯಸ್ಕರು ಎಂದು ಮೊದಲ ಆದೇಶದಲ್ಲಿ ತಿಳಿಸ ಲಾಗಿತ್ತು. ಹೀಗಾಗಿ ಹಿರಿಯರು ಮೃತಪಟ್ಟಿದ್ದರೆ ಅವಕಾಶ ಇರಲಿಲ್ಲ. ಇದರಿಂದಾಗಿ ಬಹುತೇಕ ಕುಟುಂಬಗಳು ಪರಿಹಾರಕ್ಕೆ ಅರ್ಜಿ ಹಾಕ ದಂತಾಯಿತು. ಜನಪ್ರತಿನಿಧಿಗಳ ಒತ್ತಾಯದ ಅನಂತರ ಯಾವುದೇ ವಯಸ್ಸಿನ ಒಬ್ಬರಿಗೆ ಪರಿ ಹಾರ ಎಂದು ಮರು ತಿದ್ದುಪಡಿ ಮಾಡ ಲಾಯಿತು. ಅನಂತರ ಮತ್ತೆ ಅರ್ಜಿ ಸ್ವೀಕಾರ ಮಾಡಲಾಗುತ್ತಿದೆಯಾದರೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಪರಿಹಾರ ಸಿಕ್ಕಿಲ್ಲ.

ಕಂದಾಯ ಇಲಾಖೆ ಅಧಿಕಾರಿಗಳ ಪ್ರಕಾರ, ಇದುವರೆಗೆ ಪರಿಹಾರಕ್ಕೆ ಸ್ವೀಕರಿಸಿರುವ ಅರ್ಜಿ ಗಳ ಸಂಖ್ಯೆ 15,999. ಆ ಪೈಕಿ ಬಿಪಿಎಲ್‌ ಕುಟುಂಬಗಳದ್ದು 9,080, ಎಪಿಎಲ್‌ ಕುಟುಂ ಬ ಗಳದ್ದು 6,918. ಜಿಲ್ಲಾಧಿಕಾರಿಗಳಿಂದ ಅನುಮೋದನೆಗೊಂಡ ಬಿಪಿಎಲ್‌ ಪ್ರಕರಣಗಳು 6,736, ಎಪಿಎಲ್‌ ಪ್ರಕರಣಗಳು 5,242 ಸೇರಿ 11,978. 9,647 ಕುಟುಂಬಗಳಿಗೆ ಕೇಂದ್ರ ಸರಕಾರದ 50 ಸಾವಿರ ರೂ. ಪರಿಹಾರ ಸಿಕ್ಕಿದೆ.

ತಿರಸ್ಕೃತ ಅಥವಾ ಇನ್ನೂ ವಿಲೇವಾರಿ ಆಗದ ಅರ್ಜಿಗಳ ವಿಚಾರದಲ್ಲಿ ಪ್ರಮಾಣಪತ್ರ ಮತ್ತಿತರ ಹೆಚ್ಚುವರಿ ದಾಖಲೆ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ. ಆದರೆ ಬಗ್ಗೆ ಬಹುತೇಕ ಸಂತ್ರಸ್ತ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:ಮಧ್ಯಪ್ರದೇಶದ 5 ಕಡೆ ಡ್ರೋನ್‌ ತಂತ್ರಜ್ಞಾನ ಶಾಲೆ: ಜ್ಯೋತಿರಾಧಿತ್ಯ ಸಿಂಧಿಯಾ

38,243 ಮಂದಿ ಸಾವು
ರಾಜ್ಯ ಸರಕಾರದ ಅಂಕಿಅಂಶ ಪ್ರಕಾರ 2020ರ ಮಾ. 8ರಿಂದ ಇದುವರೆಗೆ ಕೊರೊ ನಾದಿಂದ ಮೃತಪಟ್ಟವರ ಸಂಖ್ಯೆ 38,243. ಆ ಪೈಕಿ 20 ಸಾವಿರ ಕುಟುಂಬಗಳು ಬಿಪಿಎಲ್‌ ವ್ಯಾಪ್ತಿಗೆ ಬರಬಹುದು ಎಂದು ಅಂದಾಜಿಸ ಲಾಗಿತ್ತು. ವಿಪಕ್ಷಗಳ ಪ್ರಕಾರ 1 ಲಕ್ಷ ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಬಹುತೇಕ ಪ್ರಕರಣಗಳಲ್ಲಿ ಕೊರೊನಾದಿಂದ ಮೃತಪಟ್ಟ ಪ್ರಮಾಣಪತ್ರ ಸಿಕ್ಕಿಲ್ಲ, ಪರಿಹಾರ ಕೊಡಬೇಕಾ ಗುತ್ತದೆ ಎಂದು ಕೊರೊನಾ ಮೃತ ಪ್ರಕರಣ ಮುಚ್ಚಿಡಲಾಗಿದೆ ಎಂಬ ಆರೋಪವೂ ಇದೆ.

ಸಚಿವರು, ಶಾಸಕರ ಪಟ್ಟು
ಪರಿಹಾರ ನಾವೇ ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಪಟ್ಟು ಹಿಡಿದಿದ್ದಾರೆ. ಅಧಿ ಕಾರಿ ಗಳಿಂದ ಕೊಡಿಸಲು ಜನಪ್ರತಿನಿಧಿಗಳಿಗೆ ಮನಸ್ಸಿಲ್ಲ. ಹೀಗಾಗಿ ಪರಿಹಾರ ವಿತರಣೆ ವಿಳಂಬ ವಾಗುತ್ತಿದೆ. ಪರಿಷತ್‌ ಚುನಾವಣೆ ನೀತಿ ಸಂಹಿತೆ ಡಿ. 14ರ ವರೆಗೆ ಇದೆ. ಬಳಿಕ 56 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಡಿ. 17ರಿಂದ ಜಾರಿಯಾಗಲಿದೆ. ಹೀಗಾಗಿ ಪರಿಹಾರ ವಿತರಣೆ ಮತ್ತಷ್ಟು ವಿಳಂಬ ವಾಗಲಿದೆ ಎನ್ನಲಾಗುತ್ತಿದೆ.

ದೇಶದಲ್ಲೇ ಮೊದಲಿಗೆ ರಾಜ್ಯ ದಲ್ಲಿ ಕೊರೊನಾದಿಂದ ಮೃತ ಪಟ್ಟ ಬಿಪಿಎಲ್‌ ಕುಟುಂಬ ಸದಸ್ಯ ರೊಬ್ಬ ರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಪರಿಹಾರ ವಿತರಿಸಲು ಯಾವುದೇ ಸಮಸ್ಯೆ ಇಲ್ಲ, ಚುನಾವಣ ನೀತಿ ಸಂಹಿತೆಯಿಂದ ತಡವಾಗಿದೆ.
– ಆರ್‌. ಅಶೋಕ್‌, ಕಂದಾಯ ಸಚಿವ

-ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.